Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯೋ ಅಮೀರ್ ಖಾನ್ ಬಗ್ಗೆ ಹಬ್ಬಿದ್ದ ಸುದ್ದಿ ಸುಳ್ಳಾ?
ಬಾಲಿವುಡ್ ನಟ ಅಮೀರ್ ಅವರು ಮಹಾರಾಷ್ಟ್ರದ ಬರಪೀಡಿತ ಪ್ರದೇಶದ 'ತಾಲ್' ಮತ್ತು 'ಕೋರೆಗಾಂವ್' ಎಂಬ ಎರಡು ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ ಅಂತ ಈ ಹಿಂದೆ ಎಲ್ಲೆಡೆ ಸುದ್ದಿಯಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟಾ ಆಗಿದ್ದು, ಅಮೀರ್ ಅವರು ಯಾವುದೇ ಹಳ್ಳಿಗಳನ್ನು ದತ್ತು ತೆಗೆದುಕೊಂಡಿಲ್ಲ ಅಂತ ಸುದ್ದಿ ಹರಿದಾಡುತ್ತಿದೆ.
ಸದ್ಯಕ್ಕೆ ಹರಡಿರುವ ಮಾಹಿತಿ ಪ್ರಕಾರ ಅಮೀರ್ ಖಾನ್ ಅವರು ಯಾವುದೇ ಗ್ರಾಮಗಳನ್ನು ದತ್ತು ಪಡೆದುಕೊಂಡಿಲ್ಲ. ಆದರೆ ಅವರು 'ಪಾನಿ' ಫೌಂಡೇಶನ್ ಎಂಬ ಎನ್.ಜಿ.ಓ ಜೊತೆ ಸೇರಿ ಮಹಾರಾಷ್ಟ್ರದ ಸುಮಾರು 120 ಬರಪೀಡಿತ ಗ್ರಾಮಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಮಾಡಲಾಗಿದೆ.[ಅಂತೂ ಈ ಬಾರಿ ಒಳ್ಳೆ ಕೆಲಸ ಮಾಡಿದ್ದಾರೆ ಆಮಿರ್ ಖಾನ್]
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ್ದ ನಟ ಅಮೀರ್ ಖಾನ್ ಅವರು ಅಲ್ಲಿನ ಜನರಿಗೆ ಜಲ ಸಂರಕ್ಷಣೆ ಹೇಗೆ ಮಾಡೋದು?, ಹಾಗೂ ನೀರಿನ ಮಹತ್ವ ಮುಂತಾದವುಗಳ ಬಗ್ಗೆ ತಿಳುವಳಿಕೆ ನೀಡಿದ್ದರ ಜೊತೆಗೆ ಎರಡು ಹಳ್ಳಿ ದತ್ತು ಪಡೆದುಕೊಂಡಿದ್ದರು ಎಂಬ ವದಂತಿ ಎಲ್ಲಾ ಕಡೆ ಹರಡಿತ್ತು.[ಅಮೀರ್ ವಿರುದ್ಧ ಟ್ವಿಟ್ಟರ್ ನಲ್ಲಿ ರೊಚ್ಚಿಗೆದ್ದ ಸ್ಯಾಂಡಲ್ ವುಡ್ ಸ್ಟಾರ್ಸ್]
ಆದರೆ ಇದೀಗ ಹೊಸದಾಗಿ ಸುದ್ದಿಯಾಗಿರುವ ಪ್ರಕಾರ ಅಮೀರ್ ಅವರು ಯಾವುದೇ ಗ್ರಾಮಗಳನ್ನು ದತ್ತು ತೆಗೆದುಕೊಂಡಿಲ್ಲ. ಆದರೆ ಎನ್.ಜಿ.ಓ ಜೊತೆ ಸೇರಿ ಪರಿಹಾರದ ಜೊತೆಗೆ ಹಳ್ಳಿಗಳಲ್ಲಿ ನೀರಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.