Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಫೈಂಡಿಂಗ್ ಫ್ಯಾನಿ' ಚಿತ್ರದಲ್ಲಿ ರಾಜ್ಯಕ್ಕೆ ಅಗೌರವ?
ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಹಿಂದಿಯ 'ಫೈಂಡಿಂಗ್ ಫ್ಯಾನಿ' ಎಂಬ ಚಿತ್ರ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದಲ್ಲಿ ರಾಜ್ಯದ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇದೆ ಎಂಬುದೇ ಈ ವಿವಾದಕ್ಕೆ ಕಾರಣವಾಗಿರುವ ಅಂಶ.
ಇದು ಚಿತ್ರದ ಮೇಕಿಂಗ್ ವಿಡಿಯೋದಲ್ಲಿ ಬರುವ ಡೈಲಾಗ್. ಕಾರೊಂದು ಕೆಟ್ಟು ನಿಂತಿರುತ್ತದೆ. ಈ ಸಂದರ್ಭದಲ್ಲಿ ಚಿತ್ರದ ನಾಯಕ ಅರ್ಜುನ್ ಕಪೂರ್ ಕಾರನ್ನು ಗುದ್ದಿ "ಬ್ಲಡಿ ಮೆಂಟಲ್ ಸ್ಟೇಟ್" ಎನ್ನುತ್ತಾರೆ. ಇದೇ ಸನ್ನಿವೇಶದಲ್ಲಿ ಚಾಮುಂಡಿ ನಗರ ಬಸ್ ನಿಲ್ದಾಣ ಎಂಬ ಬೋರ್ಡ್ ಸಹ ಕಾಣುತ್ತದೆ.
ಆದರೆ ಈ ಆರೋಪವನ್ನು ಚಿತ್ರತಂಡ ಸುತಾರಾಂ ಒಪ್ಪುತ್ತಿಲ್ಲ. ಇದು ಕರ್ನಾಟಕ ಅಥವಾ ಯಾವುದೇ ರಾಜ್ಯಕ್ಕೆ ಸಂಬಂಧಿಸಿದ ಡೈಲಾಗ್ ಅಲ್ಲ. ಇದು ಕೇವಲ ಚಿತ್ರದ ಮೇಕಿಂಗ್ ವಿಡಿಯೋ. ಈ ಬೋರ್ಡ್ ಸಿನಿಮಾದಲ್ಲಿ ಇರುವುದಿಲ್ಲ ಎಂದು ಹೇಳಿದೆ. ಚಿತ್ರದಲ್ಲಿ ಬರುವ ಸಂಭಾಷಣೆ ಹೀಗಿದೆ.
Arjun Kapoor: We have crossed into another state
Dimple Kapadia: What state?
Arjun Kapoor: A bloody mental state.
Pankaj Kapur: Now the pictures perfect!
ಆದರೆ ಕನ್ನಡ ಪರ ಸಂಘಟನೆಗಳು ಈ ವಿವಾದಾತ್ಮಕ ಸಂಭಾಷಣೆಗೆ ಕತ್ತರಿ ಹಾಕಬೇಕು. ಚಿತ್ರತಂಡ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿವೆ. ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್ ಅವರು ಚಿತ್ರತಂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ನವರಸನಾಯಕ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಧ್ವನಿ ಎತ್ತಿದ್ದಾರೆ.
ದೀಪಿಕಾ ಪಡುಕೋಣೆ, ಅರ್ಜುನ್ ಕಪೂರ್, ನಾಸಿರುದ್ದೀನ್ ಶಾ, ಡಿಂಪಲ್ ಕಪಾಡಿಯಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರಕ್ಕೆ ಹೋಮಿ ಅದಜಾನಿಯಾ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ಇದೇ ಸೆಪ್ಟೆಂಬರ್ 12ಕ್ಕೆ ತೆರೆಕಾಣುತ್ತಿದೆ. ಈಗಾಗಲೆ ಬೂಸಾನ್ ಚಲನಚಿತ್ರೋತ್ಸವದಲ್ಲೂ ಪ್ರದರ್ಶನ ಕಂಡಿದೆ. (ಫಿಲ್ಮಿಬೀಟ್ ಕನ್ನಡ)