Don't Miss!
- Automobiles Hyundai: ಹ್ಯುಂಡೈ ಎಕ್ಸ್ಟರ್ ಮೊದಲ ಅಪಘಾತ: ಮುಗಿಬಿದ್ದು ಖರೀದಿಸಿದವರು ಇದನ್ನೊಮ್ಮೆ ನೋಡಿ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- News ಡಾ.ಮಂಜುನಾಥ್ ಅವರಿಗೆ ಕೇಂದ್ರ ಸಚಿವ ಸ್ಥಾನ: ಸುಳಿವು ಕೊಟ್ಟ ಹೆಚ್ ಡಿ ದೇವೇಗೌಡ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಟ್ಟರ ಹಿಂದಿ ಚಿತ್ರಕ್ಕೆ ಓಂ ಪುರಿ? ಲೇಟೇಸ್ಟ್ ಏನಿದೆ?
ಬಾಲಿವುಡ್ ಗೆ ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಪ್ರವೇಶ ಖಚಿತವಾಗುತ್ತಿದ್ದಂತೆ ಕಥೆ, ತಾರಾಗಣದ ಬಗ್ಗೆ ಕುತೂಹಲ ಹೆಚ್ಚಾಗತೊಡಗಿದೆ. ಹದಿಹರೆಯದ ಮನಸ್ಸಿಗೆ ಮುದ ನೀಡುವ ಚಿತ್ರ ಕಥೆ ರೆಡಿ ಮಾಡಿಕೊಂಡಿರುವ ಭಟ್ಟರು, ರೋಮ್ಯಾನ್ಸ್, ಸೆಂಟಿಮೆಂಟ್ ಮಿಕ್ಸ್ ಮಾಡಿರುವ ಒಳ್ಳೆ ಕಥೆ ನೀಡುತ್ತಾರೆ ಎಂಬ ಸುದ್ದಿಯನ್ನು ನಿರ್ಮಾಪಕ ಬಿ.ಸುರೇಶ ಅವರು ಖಚಿತಪಡಿಸಿದ್ದರು.
ಇನ್ನು ಈ ಚಿತ್ರಕ್ಕೆ ಭಟ್ರು ಒಂದೆರಡು ಟೈಟಲ್ ಗಳನ್ನೂ ಸೆಲೆಕ್ಟ್ ಮಾಡಿದ್ದಾರೆ. ಒಂದು 'ಸೌಂಡ್ ಬಡಾ ದೇ' ಹಾಗೂ ಇನ್ನೊಂದು 'ಹೆಲ್ಮಟ್'. ಆದರೆ ಎರಡೂ ಟೈಟಲ್ ಗಳಲ್ಲಿ ಯಾವುದನ್ನೂ ಫೈನಲ್ ಮಾಡಿಲ್ಲ. ಪ್ರಕಾಶ್ ರೈ ಅವರಂತೂ ಚಿತ್ರದಲ್ಲಿರುತ್ತಾರೆ ಎಂಬುದನ್ನು ಭಟ್ಟರೇ ಈ ಹಿಂದೆ ಹೇಳಿದ್ದರು.
ಈಗ ಹೊಸ ಸುದ್ದಿ ಎಂದರೆ, fukrey ಚಿತ್ರ ಖ್ಯಾತಿಯ ಮಂಜಿತ್ ಸಿಂಗ್ ಅವರನ್ನು ಪ್ರಮುಖ ಪಾತ್ರದಲ್ಲಿ ಹಾಕಿಕೊಳ್ಳಲಾಗಿದೆಯಂತೆ. ರಿಪಬ್ಲಿಕ್ ಡೇ ದಿನ ಸೆಟ್ಟೇರಬೇಕಿದ್ದ ಚಿತ್ರ ಈಗ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಣ ಆರಂಭಿಸುವ ಸಾಧ್ಯತೆ ಕಂಡು ಬಂದಿದೆ.
ಚಿತ್ರದ ಟೈಟಲ್ ಬಗ್ಗೆ ಭಟ್ರು ತಲೆಕೆಡಿಸಿಕೊಂಡಿದ್ದರೆ, ನಿರ್ಮಾಪಕಿ ಶೈಲಜಾ ನಾಗ್ ಹಾಗೂ ಬಿ. ಸುರೇಶ್ ಅವರು ಆಡಿಷನ್ ಜವಾಬ್ದಾರಿ ಹೊತ್ತಿದ್ದಾರೆ. ಒಂದು ಮೂಲದ ಪ್ರಕಾರ ಓಂ ಪುರಿ ಅವರಿಗೆ ಪ್ರಮುಖ ಪಾತ್ರ ಸಿಗಲಿದೆಯಂತೆ. ಪಾತ್ರದ ಬಗ್ಗೆ ಇನ್ನೂ ತಿಳಿದು ಬಂದಿಲ್ಲ.
ಅಮಿತಾಬ್ ಬಚ್ಚನ್ ಅವರಿಗೆ ಪ್ರಧಾನ ಪಾತ್ರ( ಭಟ್ಟರ ಪಂಚರಂಗಿಯ ಅನಂತ್ ನಾಗ್ ಪಾತ್ರದಂತೆ) ನೀಡುವ ಸಾಧ್ಯತೆ ಬಗ್ಗೆ ಸುದ್ದಿ ಹರಡಿತು. ಭಟ್ಟರು ಕೂಡಾ ಬಿಗ್ ಬಿ ಒಳ್ಳೆ ಪಾತ್ರ ಸೃಷ್ಟಿಸಿರುವ ಬಗ್ಗೆ ಹೇಳಿಕೊಂಡಿದ್ದರು.
ಬಿಗ್ ಬಿ ಜೊತೆಗೆ ಡೈಲಾಗ್ ಕಿಂಗ್ ನಾನಾ ಪಾಟೇಕರ್ ಅವರನ್ನು ತಾರಾಗಣದಲ್ಲಿ ಸೇರಿಸಿಕೊಳ್ಳಲಾಗಿದೆಯಂತೆ. 1999ರಲ್ಲಿ ಮೆಹುಲ್ ಕುಮಾರ್ ಅವರ ಕೊಹ್ರಾಂ ಚಿತ್ರದಲ್ಲಿ ಬಿಗ್ ಬಿ ಹಾಗೂ ನಾನಾ ಪಾಟೇಕರ್ ಒಟ್ಟಿಗೆ ನಟಿಸಿದ್ದರು. ಅದರೆ, ಚಿತ್ರ ಬಾಕ್ಸಾಫೀಸ್ ನಲ್ಲಿ ಸದ್ದು ಮಾಡಿರಲಿಲ್ಲ. ಈಗ ಮತ್ತೊಮ್ಮೆ ಇಬ್ಬರನ್ನು ಒಟ್ಟಿಗೆ ತೆರೆ ಮೇಲೆ ನೋಡುವ ಅವಕಾಶವನ್ನು ಭಟ್ಟರು ಸೃಷ್ಟಿಸುತ್ತಿದ್ದಾರೆ ಎನ್ನಲಾಗಿತ್ತು.
ಒಟ್ಟಾರೆ, ಸುದೀಪ್, ಯಶ್ ಸಿನಿಮಾಗಳನ್ನು ನಿರ್ದೇಶಿಸುವ 'ಯೋಗ' ಸಿಕ್ಕರೂ ಮುಂಬೈಗೆ ಹೊಸ ಕನಸು ಹೊತ್ತು ಸಾಗಿರುವ ಭಟ್ಟರ ಬಾಲಿವುಡ್ ಜರ್ನಿ ಸುಗಮವಾಗಿರಲಿ ಎಂಬುದಷ್ಟೆ ನಮ್ಮ ಹಾರೈಕೆ.