Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಲಂಡಾಗ್ ಕೆಟ್ಟ ಚಿತ್ರ:ಗಿರೀಶ್ ಕಾರ್ನಾಡ್ !!
ಸ್ಲಂಡಾಗ್ ಮಿಲೇನಿಯರ್ ನಾನು ನೋಡಿದ ಅತ್ಯಂತ ಕೆಟ್ಟಚಿತ್ರ. ಭಾರತವನ್ನು ಅತ್ಯಂತ ಕೆಟ್ಟದಾಗಿ ಬಿಂಬಿಸಿರುವ ಆ ಚಿತ್ರಕ್ಕೆ ಹೇಗೆ ಆಸ್ಕರ್ ಬಂತೆಂದು ನನಗೆ ತಿಳಿಯದ ಎಂದು ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರಕ್ಕೆ ಮಂಗಳಾರತಿ ಮಾಡಿದವರು ಪದ್ಮಭೂಷಣ ಹಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್.
ರಂಗಭೂಮಿ, ಕಲೆ, ಸಿನಿಮಾಗಳಲ್ಲಿ ಸೈ ಎನಿಸಿಕೊಂಡಿರುವ ಕಾರ್ನಾಡ್, ಪಣಜಿಯಲ್ಲಿ ನಡೆದ 'ವಸಾಹತುಶಾಹಿ ಸಂಸ್ಕೃತಿ' ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಭಾರತದ ಕಥಾನಕ ಹೊಂದಿದ್ದರೂ 'ಸ್ಲಂಡಾಗ್' ಭಾರತದಲ್ಲಿ ಅತಿ ಕಡಿಮೆ ಪ್ರದರ್ಶನ ಕಂಡಿದೆ. ನನ್ನ ವೃತ್ತಿ ಜೀವನದಲ್ಲಿ ಈ ಚಿತ್ರ ನಾನು ನೋಡಿದ ಅತ್ಯಂತ ಕೆಟ್ಟ ಮತ್ತು ಕಳಪೆ ಚಿತ್ರ ಎಂದು ಬಣ್ಣಿಸಿದ್ದಾರೆ.
ಶ್ರೀಮಂತ ಸಂಸ್ಕೃತಿ ಹೊಂದಿರುವ ನಾವು ಆಸ್ಕರ್, ಗ್ರ್ಯಾಮಿ ಪರಶಸ್ತಿಗಳ ಮೋಹಕ್ಕೆ ಒಳಗಾಗತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ನಮ್ಮ ಚಿತ್ರರಂಗ ವಿಶ್ವದ ಯಾವುದೇ ಸ್ಪರ್ಧೆಗೂ ಸವಾಲೊಡ್ಡಬಲ್ಲ ಸಾಮರ್ಥ್ಯ ಹೊಂದಿದೆ ಎಂದು ಗಿರೀಶ್ ಕಾರ್ನಾಡ್ ಅಭಿಪ್ರಾಯಪಟ್ಟರು.