Don't Miss!
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರೆ ಕರಿಷ್ಮಾ ಕಪೂರ್ ದಾಂಪತ್ಯ ಜೀವನ ನುಚ್ಚುನೂರು
2010ರಲ್ಲಿ ಎರಡನೆ ಮಗು ಕಿಯಾನ್ ರಾಜ್ ನನ್ನು ಹೆತ್ತ ಬಳಿಕ ಕರಿಷ್ಮಾ ತಮ್ಮ ಪತಿ ಸಂಜಯ್ ಮೇಲೆ ಆಸಕ್ತಿ ಕಳೆದುಕೊಂಡಿದ್ದರು. ಆತನೊಬ್ಬ ಸ್ತ್ರೀಲೋಲ ಎಂಬ ಕಾರಣಕ್ಕೆ ಕರಿಷ್ಮಾ ಕಪೂರ್ ದೂರಾಗಿದ್ದರು. ಈ ಕಾರಣಕ್ಕೆ ತಮ್ಮ ಗಂಡನಿಗೆ ಸೋಡಾಚೀಟಿ ನೀಡಿದ್ದಾಗಿ ತಿಳಿಸಿದ್ದರು.
ಈಗ ಇಬ್ಬರೂ ಪರಸ್ಪರ ಬೇರ್ಪಡಲು ಒಪ್ಪಿದ್ದು ವಿಚ್ಛೇದನ ಪತ್ರಗಳಿಗೆ ಸಹಿಹಾಕಿದ್ದಾರೆ. ಇನ್ನೇನಿದ್ದರೂ ಕಾನೂನಿನ ಮುದ್ರೆ ಬೀಳುವುದೊಂದು ಬಾಕಿ ಉಳಿದಿದೆ. ಕರಿಷ್ಮಾ ಹಾಗೂ ಸಂಜಯ್ ಅವರು 2003ರಲ್ಲಿ ಮದುವೆಯಾದ ಸ್ವಲ್ಪ ದಿನಗಳಲ್ಲೇ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು.
ಇಬ್ಬರೂ ಅದು ಹೇಗೋ ಹೊಂದಾಣಿಕೆ ಮಾಡಿಕೊಂಡು ಬಾಳದೋಣಿಯನ್ನು ಮುಂದೂಡುತ್ತಿದ್ದರು. 2005ರಲ್ಲಿ ಮಗಳು ಸಮೈರಾ ಹುಟ್ಟಿದ ಬಳಿಕ ಕರಿಷ್ಮಾ ಕಪೂರ್ ತನ್ನ ಗಂಡನನ್ನು ದೆಹಲಿಯಲ್ಲೇ ಬಿಟ್ಟು ಮುಂಬೈಗೆ ಸ್ಥಳಾಂತರವಾಗಿದ್ದರು. ಕರಿಷ್ಮಾ ಪೋಷಕರು ಇವರಿಬ್ಬರನ್ನು ಒಂದು ಮಾಡಲು ಮಾಡಿದ ಪ್ರಯತ್ನಗಳೆಲ್ಲವೂ ಹೊಳೆಯಲ್ಲಿ ಹುಣೆಸೆಹಣ್ಣು ತೊಳೆದಂತಾಯಿತು.
ಕಡೆಗೆ ಇಬ್ಬರನ್ನೂ ಒಂದು ಮಾಡಲು ಸಾಧ್ಯವಾಗಲಿಲ್ಲ. ಸಂಜಯ್ ಹೇಳಿಕೇಳಿ ಸ್ತ್ರೀಲೋಲ. ಈ ಬಗ್ಗೆ ಕರಿಷ್ಮಾ ಆತನಿಗೆ ಎಷ್ಟು ಬುದ್ಧಿ ಹೇಳಿದರು ಆತ ತನ್ನ ಚಾಳಿ ಬಿಡಲಿಲ್ಲ. ಕಡೆಗೆ ಆತನ ವರ್ತನೆಗೆ ರೋಸಿಹೋಗಿ ಆತನಿಂದ ಬೇರ್ಪಡಲು ಕೈಗೆತ್ತಿಕೊಂಡ ಅಸ್ತ್ರವೇ ವಿವಾಹ ವಿಚ್ಛೇದನ. (ಏಜೆನ್ಸೀಸ್)