Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀರ್ ದೋಸೆ ಹಾಕೋಕೆ ರಮ್ಯಾ ಬರೋದು ಡೌಟು
ನಿಮಗೆ ಗೊತ್ತಿದೆಯೋ ಇಲ್ವೋ ನಮಗೆ ಗೊತ್ತಿಲ್ಲ. 2013ರಲ್ಲಿ ಅತ್ಯಂತ ಹೆಚ್ಚು ಬಾರಿ ಕಾಂಟ್ರರ್ಸಿಗಳಿಗೆ ಸುದ್ದಿಯಾದ ಚಿತ್ರ ಅಂದ್ರೆ ಅದು 'ನೀರ್ ದೋಸೆ'. ವಿವಾದಗಳನ್ನೇ ಹೊದ್ದು ಮಲಗಿದ ಚಿತ್ರ ಅದು. ಆದರೆ ಯಾಕೋ ಚಿತ್ರ ವಿವಾದಗಳನ್ನ ಮಾತ್ರ ಅಲ್ಲ. ನಿಜವಾಗಿಯೂ ಕಂಬಳಿಯನ್ನ ಹೊದ್ದು ಮಲಗುತ್ತೆ ಅನ್ನಿಸ್ತಾ ಇದೆ.
ಒಂದು ಕಡೆ ರಮ್ಯಾ ಮೇಡಂ ನಾನು ಸಿನಿಮಾದ ಶೂಟಿಂಗ್ ಮುಗಿಸಿಕೊಡ್ತೀನಿ ಅಂದಿದ್ದಾರೆ. ಆದರೆ ನಿರ್ದೇಶಕ ವಿಜಯ ಪ್ರಕಾಶ್ ಮಾತ್ರ ವಾಣಿಜ್ಯ ಮಂಡಳಿಯನ್ನ ನಾಲ್ಕು ಬಾರಿ ಅಲೆದು ಚಪ್ಪಲಿ ಸವೆಸಿಕೊಂಡಿದ್ದಾರೆ. ವಿವಾದ ಬಗೆಹರಿಸಿಕೊಳ್ಳೋಕೆ ವಾಣಿಜ್ಯ ಮಂಡಳಿಗೇನೇ ಮೆನೇಜರ್ ಕಳಿಸಿದ್ದ ರಮ್ಯಾ ಮೇಡಂ ಇನ್ನು ಶೂಟಿಂಗ್ ಗೆ ಬರ್ತಾರಾ ಅಂತ ನಿರ್ದೇಶಕರು ಸುಮ್ಮನಾಗಿದ್ದಾರೆ ಅಂದುಕೊಂಡ್ರೆ ನಿಮ್ಮ ತಪ್ಪು. [ಲಕ್ಕಿ ಸ್ಟಾರ್ ರಮ್ಯಾ ಕೊನೆಯ ಸಿನಿಮಾ ಆರ್ಯನ್?]
ಎಂಪಿ ಮೇಡಂ ಡೈಲಾಗ್ ಗೆ ಡೈಲಾಗ್ ಬರೆಯೋ ನಿರ್ದೇಶಕರು ಹಾಗೂ ಬಂಡವಾಳ ಹೂಡಿರುವ ನಿರ್ಮಾಪಕರು ಗರಬಡಿದಂತಾಗಿದ್ದಾರೆ ಎಂಬುದು ಗಾಂಧಿನಗರದ ಗಲ್ಲಿಗಳ ಗುಲ್ಲು. ಈಗ ಸುಮ್ಮನಾದ್ರೆ ರಮ್ಯಾ ಮೇಡಂ ಇನ್ನೂ ನಾಲ್ಕೈದು ತಿಂಗಳು ಸಿಗೋದು ಡೌಟು ಅಂತಿದೆ ನಮ್ಮ ಗಾಂಧಿನಗರ. ಲೋಕಸಭಾ ಚುನಾವಣೆ ಬಂತು ರಮ್ಯಾ ಮತ್ತೆ ಲೋಕಸಭೆಗೆ ನಿಲ್ಲೋದು ಗ್ಯಾರಂಟಿ. ಎಲ್ಲ ಸರಿ ಆದರೆ ಈ 'ನೀರ್ ದೋಸೆ' ಕಥೆ ಏನು?