Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಮಾಮನ ಜೊತೆ ಚಾಲೆಂಜಿಂಗ್ ಸ್ಟಾರ್ ತೆರೆ ಹಂಚಿಕೊಳ್ಳುತ್ತಾರಂತೆ!
ಸಾಮಾನ್ಯವಾಗಿ ಹಿಂದಿ ಸಿನಿಮಾಗಳು ತಮಿಳು, ತೆಲುಗು ಭಾಷೆಗೆ ರಿಮೇಕ್ ಆಗೋದು ಸಹಜ. ಆದರೆ ಕನ್ನಡಕ್ಕೆ ರಿಮೇಕ್ ಆಗೋದು ಬಹಳ ಕಡಿಮೆ. ಇದೀಗ ಕನ್ನಡಿಗರ ಅಭಿರುಚಿಗೆ ತಕ್ಕಂತೆ ಬಾಲಿವುಡ್ ಸಿನಿಮಾವೊಂದು ಕನ್ನಡಕ್ಕೆ ರಿಮೇಕ್ ಆಗಲು ಎಲ್ಲಾ ತಯಾರಿಯು ನಡೆಯುತ್ತಿದೆ.
ಬಿಟೌನ್ ನಲ್ಲಿ ವಿವಾದಗಳ ಜೊತೆ-ಜೊತೆಗೆ ಸಖತ್ ಸುದ್ದಿ ಮಾಡಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎನಿಸಿಕೊಂಡ ನಟ ಅಕ್ಷಯ್ ಕುಮಾರ್ ಅವರ 'ಓ ಮೈ ಗಾಡ್', ಚಿತ್ರ ಕನ್ನಡಕ್ಕೆ ರಿಮೇಕ್ ಆಗಲಿದೆ. ಚಿತ್ರದಲ್ಲಿ ನಾಯಕನಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕಾಣಿಸಿಕೊಳ್ಳಲಿದ್ದಾರೆ. ಇಷ್ಟು ದಿನ ಪ್ರೀತಿ ಪ್ರೇಮದ ಜಪ ಮಾಡುತ್ತಿದ್ದ ರವಿಮಾಮ ಇದೀಗ ದೇವರ ಜಪ ಮಾಡುವುದು ಪಕ್ಕಾ ಆಗಿದೆ.[ದಕ್ಷಿಣ ಅಮೆರಿಕದಿಂದ ದರ್ಶನ್ ಮನೆಗೆ ಬಂದ ಹೊಸ ಅತಿಥಿ]
ಗೋಲ್ಡನ್ ಸ್ಟಾರ್ ಗಣೇಶ್ ಅವರ 'ಬುಗುರಿ' ಚಿತ್ರದ ನಂತರ ನಿರ್ದೇಶಕ ಎಂ.ಡಿ ಶ್ರೀಧರ್ ಅವರು ಕನ್ನಡದ 'ಓ ಮೈ ಗಾಡ್', ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಕನ್ನಡಿಗರ ಅಭಿರುಚಿಗೆ ತಕ್ಕಂತೆ ಚಿತ್ರಕಥೆಯನ್ನು ತಯಾರಿಸಲಾಗಿದೆ.
ಬಾಲಿವುಡ್ ಸಿನಿಮಾ 'ಓ ಮೈ ಗಾಡ್' ಚಿತ್ರದಲ್ಲಿ ನಟ ಅಕ್ಷಯ್ ಕುಮಾರ್ ಹಾಗೂ ಪರೇಶ್ ರಾವೆಲ್ ಜುಗಲ್ ಬಂದಿಯಲ್ಲಿ ಮೂಡಿಬಂದಿದ್ದ ಚಿತ್ರ ಸೂಪರ್ ಹಿಟ್ ಆಗಿತ್ತು. ಸುಮಾರು 20 ಕೋಟಿ ಬಜೆಟ್ ವೆಚ್ಚದಲ್ಲಿ ತಯಾರಾಗಿದ್ದ ಸಿನಿಮಾ 120 ಕೊಟಿ ಗಳಿಸುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು.[ದರ್ಶನ್ ಕೈಗೆ ಪೆಟ್ಟು; 'ಜಗ್ಗು ದಾದಾ' ಶೂಟಿಂಗ್ ಮುಂದಕ್ಕೆ.!]
ಅಷ್ಟೆ ಅಲ್ಲದೇ ಈ ಚಿತ್ರ ಟಾಲಿವುಡ್ ಗೂ ರಿಮೇಕ್ ಆಗಿ ಅಲ್ಲಿ ಗೋವಿಂದ ಗೋವಿಂದ ಎಂಬ ಹೆಸರಿನಲ್ಲಿ ನಟ ಪವನ್ ಕಲ್ಯಾಣ್ ಅವರ ಕಾಣಿಸಿಕೊಂಡಿದ್ದರು. ಇದೀಗ 'ಓ ಮೈ ಗಾಡ್' ನಲ್ಲಿ ನಟ ಅಕ್ಷಯ್ ಕುಮಾರ್ ಮಾಡಿದ್ದ ಪಾತ್ರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಡುತ್ತಾರೆ ಎಂದು ಗಾಂಧಿನಗರದಲ್ಲಿ ಮಾತುಗಳು ಕೇಳಿ ಬರುತ್ತಿದೆ. ಇದು ಆಫೀಶಿಯಲ್ ಆಗಿ ಇನ್ನೇನು ಕೆಲವೇ ದಿನಗಳಲ್ಲಿ ಪಕ್ಕಾ ಆಗಲಿದ್ದು, ಆ ನಂತರ ಎಲ್ಲರಿಗೂ ಉತ್ತರ ದೊರೆಯಲಿದೆ.
ಅದೇನೇ ಇರಲಿ ನಟ ರವಿಚಂದ್ರನ್ ಅವರು ಕಿಚ್ಚ ಸುದೀಪ್ ಅವರ ಜೊತೆ 'ಮಾಣಿಕ್ಯ' ಚಿತ್ರದಲ್ಲಿ ಕಾಣಿಸಿಕೊಂಡ ನಂತರ ಇತ್ತೀಚೆಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ.