Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಂತ್ ಹೆಗ್ಡೆಗೆ ಕೈಕೊಟ್ಟ ನಿಂಬೆಹಣ್ಣಿನಂತ ಬೆಡಗಿ
ನಟ ಕಮ್ ನಿರ್ದೇಶಕ ಹೇಮಂತ್ ಹೆಗ್ಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ನಿಂಬೆಹಣ್ಣಿನಂತ ಬೆಡಗಿ ಅವರಿಗೆ ಕೈಕೊಟ್ಟಿದ್ದಾರೆ. ಈ ಸಂಬಂಧ ಅವರು ದೂರು ನೀಡಲು ಮುಂದಾಗಿದ್ದಾರೆ. ಆಕೆ ಬೇರಾರು ಅಲ್ಲ 'ನಿಂಬೆಹುಳಿ' ಚಿತ್ರದ ನಟಿ ಕೋಮಲ್ ಝಾ.
ಹೇಮಂತ್ ಹೆಗ್ಡೆ ನಟಿಸಿ, ನಿರ್ದೇಶಿಸುತ್ತಿರುವ ನಿಂಬೆಹುಳಿ ಚಿತ್ರದ ಮೂವರು ಹೀರೋಯಿನ್ ಗಳಲ್ಲಿ ಕೋಮಲ್ ಝಾ ಸಹ ಒಬ್ಬರು. ಆದರೆ ಈಕೆ ಚಿತ್ರೀಕರಣಕ್ಕೆ ಬಾರದೆ ಪತ್ರಿಕೆಗಳಿಗೆ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಮಂತ್ ಆರೋಪಿಸಿದ್ದಾರೆ.
ಆಕೆ ಕೈಕೊಟ್ಟ ಕಾರಣ ತಾನು ಮತ್ತೊಬ್ಬ ಖ್ಯಾತ ನಟ ಅನುಪಮ್ ಖೇರ್ ಅವರನ್ನು ಕಳೆದುಕೊಳ್ಳಬೇಕಾಯಿತು. ಅವರು ಕೊಟ್ಟ ಕಾಲ್ ಶೀಟ್ ಘಳಿಗೆ ಕೂಡ ಮುಗಿಯಿತು. ಕೋಮಲ್ ಝಾ ಮೂರು ತಿಂಗಳು ಸತಾಯಿಸಿದ್ದಕ್ಕೇ ಹೀಗಾಯಿತು ಎನ್ನುತ್ತಾರೆ ಹೇಮಂತ್.
ಈಗ ಅನುಪಮ್ ಖೇರ್ ಸ್ಥಾನಕ್ಕೂ ಬೇರೆ ನಟರನ್ನು ಕರೆತರಲು ಹೆಗ್ಡೆ ನಿರ್ಧರಿಸಿದ್ದಾರೆ. ಬಹುಶಃ ರಂಗಾಯಣ ರಘು ಅಥವಾ ರಮೇಶ್ ಅರವಿಂದ್ ಅವರನ್ನು ಕರೆತರುವ ಸಾಧ್ಯತೆಗಳಿವೆ. ಮಧುರಿಮಾ ಹಾಗೂ ನಿವೇದಿತಾ ಚಿತ್ರದ ಇನ್ನಿಬ್ಬರು ನಾಯಕಿಯರು.
'ನಿಂಬೆಹುಳಿ' ಚಿತ್ರದ ಹಾಡು "ರಾಮ ರಾಮಾ ಶ್ರೀರಾಮ ಫಸ್ಟ್ ನೈಟೇ ಟ್ರಾಫಿಕ್ ಜಾಮಾ..." (ವಿಡಿಯೋ ನೋಡಿ) ಎಂಬ ಹಾಡು ಯೂಟ್ಯೂಬ್ ನಲ್ಲಿ ಹೊಸ ಹವಾ ಎಬ್ಬಿಸಿದೆ. ವೀರ್ ಸಮರ್ಥ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಬರೆದವರು ಜನಪ್ರಿಯ ಹನಿಗವಿ ಎಚ್ ದುಂಡಿರಾಜ್. (ಒನ್ಇಂಡಿಯಾ ಕನ್ನಡ)