Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರದ ಗಾಸಿಪಿಗೆ ತೆರೆ ಎಳೆದ ಪುನೀತ್
ಪುನೀತ್, ಯೋಗಿ ಅಭಿನಯದ ಯಾರೇ ಕೂಗಾಡಲಿ ಚಿತ್ರ ಪ್ರಚಂಡ ಯಶಸ್ಸು ಪಡೆದ ನಂತರ ಹುಟ್ಟಿಕೊಂಡ ಗಾಸಿಪಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೊಸ ವರ್ಷದ ಮುನ್ನಾ ದಿನ ತೆರೆ ಎಳೆದಿದ್ದಾರೆ.
ಯಾರೇ ಕೂಗಾಡಲಿ ಚಿತ್ರದ ನಿರ್ದೇಶಕ ತಮಿಳಿನ ಸಮುದ್ರಖಣಿ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರ ಮುಂದಿನ ಚಿತ್ರ ಸೆಟ್ಟೇರಲಿದೆ ಎಂದು ಊರೆಲ್ಲಾ ಸುದ್ದಿಯಾಗಿತ್ತು.
ನಾನು ಮತ್ತೆ ಸಮುದ್ರಖಣಿ ನಿರ್ದೇಶನದಲ್ಲಿ ನಟಿಸುತ್ತೇನೆ ಎಂದು ಹೇಳಿದ್ದು ನಿಜ, ಆದರೆ ನನ್ನ ಮುಂದಿನ ಚಿತ್ರ ಅವರ ನಿರ್ದೇಶನದ ಚಿತ್ರವಲ್ಲ.
ನಾಲ್ಕೈದು ಚಿತ್ರಗಳಿಗೆ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಕ್ರಿಪ್ಟ್ ಯಾವುದು ಇನ್ನೂ ಅಂತಿಮವಾಗಿಲ್ಲ.
ಮಾತುಕತೆ ಮುಗಿದು ಎಲ್ಲಾ ಅಂತಿಮವಾದ ಮೇಲೆ ನಾನೇ ಮಾಧ್ಯಮದವರಿಗೆ ತಿಳಿಸುತ್ತೇನೆ ಎಂದು ಪುನೀತ್ ಹೇಳಿದ್ದಾರೆ.
ರಾಘಣ್ಣನ ಮಗ ವಿನಯ್ ಕೂಡಾ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾನೆ. ಒಳ್ಳೆ ಸ್ಕ್ರಿಪ್ಟ್ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದೇವೆ. ಎಲ್ಲಾ ಅಂದುಕೊಂಡಂತೆ ನಡೆದರೆ ನಮ್ಮ ಕುಟುಂಬದ ಇನ್ನೊಬ್ಬ ಕಲಾವಿದನನ್ನು ರಾಜ್ಯದ ಜನತೆಗೆ ಪರಿಚಯಿಸುತ್ತೇವೆ ಎಂದು ಪುನೀತ್ ಹೇಳಿದ್ದಾರೆ.
ಮೂಲ: ಕಸ್ತೂರಿ ನ್ಯೂಸ್ 24X7