Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೃತಿಕ್ 'ಧೂಮ್-4'ಗೆ ವಿಲನ್ ಆಗಲಿದ್ದಾರ?, 'ಬಾಹುಬಲಿ' ಶಿವುಡು!
ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಬಿಗ್ ಹಿಟ್ 'ಬಾಹುಬಲಿ' ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಆಯ್ತು. 100 ದಿನದ ಸಂಭ್ರಮಾಚರಣೆಯನ್ನು ಆಚರಿಸಿಕೊಂಡಿದ್ದು ಆಯ್ತು.
ಇದೀಗ 'ಬಾಹುಬಲಿ' ಚಿತ್ರದ ಭರ್ಜರಿ ಯಶಸ್ಸಿನಲ್ಲಿರುವ ನಟ ಪ್ರಭಾಸ್ ಅವರಿಗೆ ಮತ್ತೊಂದು ಹಾಟ್ ಅವಕಾಶ ದೊರೆತಿದ್ದು, ಅವರ ಸಂತೋಷವನ್ನು ಇಮ್ಮಡಿಗೊಳಿಸುವ ಸಂದರ್ಭ ಒದಗಿ ಬಂದಿದೆ.
ಈಗಾಗಲೇ 'ಬಾಹುಬಲಿ ಭಾಗ 2'ರ ಶೂಟಿಂಗ್ ಕೂಡ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಪ್ರಭಾಸ್ ಅವರಿಗೆ ಬಿಟೌನ್ ನಿಂದ ಕರೆ ಬಂದಿದೆ. ಅದೇನಪ್ಪಾ ಅಂದ್ರೆ, ಬಾಲಿವುಡ್ ನಟ ಹೃತಿಕ್ ರೋಷನ್ ಅವರು 'ಧೂಮ್ 4' ಸಿನಿಮಾದ ತಯಾರಿ ನಡೆಸುತ್ತಿದ್ದು, ಚಿತ್ರದ ವಿಲನ್ ಪಾತ್ರಕ್ಕೆ ಭಾರಿ ಕಸರತ್ತು ನಡೆಯುತ್ತಿದೆ.
ಈ ಸಂದರ್ಭದಲ್ಲಿ ಯಶ್ ರಾಜ್ ಫಿಲ್ಮ್ ಬ್ಯಾನರ್ ಗೆ ಕಣ್ಣಿಗೆ ಕಂಡಿದ್ದು, 'ಬಾಹುಬಲಿ' ಯಶಸ್ಸಿನಲ್ಲಿ ಬೀಗುತ್ತಿರುವ ತೆಲುಗು ನಟ ಪ್ರಭಾಸ್. ಇದೀಗ ಬಲ್ಲ ಮಾಹಿತಿಗಳ ಪ್ರಕಾರ ನಟ ಹೃತಿಕ್ ಅವರ 'ಧೂಮ್ 4' ಗೆ ವಿಲನ್ ಪಾತ್ರ ವಹಿಸಲು ತೆಲುಗು ನಟ ಪ್ರಭಾಸ್ ಅವರೊಂದಿಗೆ ಯಶ್ ರಾಜ್ ಫಿಲ್ಮ್ ಬ್ಯಾನರ್ ಮಾತುಕತೆ ನಡೆಸಿದೆಯಂತೆ. ಆದರೆ ಇದಕ್ಕೆ ಪ್ರಭಾಸ್ ಅವರು ಇನ್ನೂ ಹಸಿರು ನಿಶಾನೆ ತೋರಿಸಿಲ್ಲ.
ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರು ಈಗಾಗಲೇ 'ಬಾಹುಬಲಿ 2' ಚಿತ್ರದ ಚಿತ್ರೀಕರಣಕ್ಕೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಸದ್ಯಕ್ಕೆ ಪ್ರಭಾಸ್ ಕೂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಆದರೆ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಎಂಟ್ರಿ ಪಡೆಯಲು ನಟ ಪ್ರಭಾಸ್ ಅವರಿಗೆ ಆಫರ್ ಬಂದಿದ್ದು, ಇದನ್ನು ಸ್ವೀಕರಿಸುತ್ತಾರೋ ಅಥವಾ ಕೈ ಬಿಡುತ್ತಾರ ಅಂತ ಕಾದು ನೋಡಬೇಕು.