twitter
    For Quick Alerts
    ALLOW NOTIFICATIONS  
    For Daily Alerts

    ಬೆಳ್ಳಿತೆರೆಗೆ ನಿರ್ಮಾಪಕ ಸಾ.ರಾ.ಗೋವಿಂದು ಕುಡಿ

    By ರವಿಕಿಶೋರ್
    |

    Sa.Ra. Govindu
    ಮೊನ್ನೆ ಮೊನ್ನೆಯಷ್ಟೇ ಗಿರಿಕನ್ಯೆ ಖ್ಯಾತಿಯ ಜಯಮಾಲಾ ಅವರ ಕುಡಿ ಸೌಂದರ್ಯಾ ಅವರು 'ಗಾಡ್ ಫಾದರ್' ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟರು. ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಖಾಯಂ ಸ್ಟಾರ್ ಆಗಿರುವ ಸಾ.ರಾ.ಗೋವಿಂದು ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ.

    ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಹೊರಟಿರುವವರು ನಿರ್ದೇಶಕ ಸಂತು. ಅವರಿಗೆ ಈ ಖತರ್ನಾಕ್ ಐಡಿಯಾ ಕೊಟ್ಟವರು ನಿರ್ಮಾಪಕ ಬೆಂ.ಕೋ.ಶ್ರೀ ಅಲಿಯಾಸ್ ಬಿ.ಕೆ.ಶ್ರೀನಿವಾಸ್. ಚಿತ್ರದ ಹೆಸರು ಗೊತ್ತೇ ಇದೆಯಲ್ಲಾ 'ಅಡ್ಡ'.

    ಇದೇ 'ಅಡ್ಡ' ಶೀರ್ಷಿಕೆಗಾಗಿ ಜೋಗಿ ಪ್ರೇಮ್ ಹಾಗೂ ಬೆಂ.ಕೋ.ಶ್ರೀ ನಡುವೆ ಜಟಾಪಟಿ ನಡೆದಿತ್ತು. ಕಡೆಗೆ 'ಅಡ್ಡ' ಶೀರ್ಷಿಕೆ ಶ್ರೀನಿವಾಸ್ ಅವರ ಪಾಲಾಗುವಂತೆ ಮಾಡುವಲ್ಲಿ ಸಾ.ರಾ.ಗೋವಿಂದು ಅವರು ಕೈವಾಡ ಬಹಳಷ್ಟಿದೆ.

    ಇದೇ ಕಾರಣಕ್ಕೋ ಏನೋ ಸಾ.ರಾ.ಗೋವಿಂದು ಅವರ ಮಗನನ್ನು ಹೀರೋ ಮಾಡಲು ಹೊರಟಿದ್ದಾರೆ ಎನ್ನುತ್ತವೆ ಮೂಲಗಳು. ಆದರೆ ಸುದ್ದಿ ಇನ್ನೂ ಅಧಿಕೃತವಲ್ಲದಿದ್ದರೂ ಕಿವಿಯಿಂದ ಕಿವಿಗೆ ಹಬ್ಬುತ್ತಿದೆ. ಫಿಲಂ ಚೇಂಬರ್ ನಲ್ಲೂ ಇದೇ ಮಾತುಗಳು ಪ್ರತಿಧ್ವನಿಸುತ್ತಿವೆ.

    ಆದರೆ ಸಾ.ರಾ.ಗೋವಿಂದು ಅವರಿಗೆ ಮಾತ್ರ ತಮ್ಮ ಮಗನನ್ನು ಇಷ್ಟು ಬೇಗ ಚಿತ್ರರಂಗಕ್ಕೆ ಪರಿಚಯಿಸುವ ಉಮೇದಿ ಇಲ್ಲವಂತೆ. ಒಂದಷ್ಟು ಪೂರ್ವ ತಯಾರಿ ಮಾಡಿಕೊಂಡು ಆಕ್ಟಿಂಗ್ ನಲ್ಲಿ ಅಆಇಈ ಹೇಳಿಕೊಟ್ಟು ಆ ಬಳಿಕವಷ್ಟೇ ಬೆಳ್ಳಿತೆರೆಗೆ ಬಿಡೋಣ ಎಂಬ ಆಲೋಚನೆ ಇದೆಯಂತೆ.

    ಆದರೆ 'ಅಡ್ಡ' ನಿರ್ಮಾಪಕರು ಮಾತ್ರ ಗೋವಿಂದು ಮಗನನ್ನು ಹೇಗಾದರೂ ಮಾಡಿ ಕ್ಯಾಮೆರಾ ಮುಂದೆ ತಂದು ನಿಲ್ಲಿಸುವ ಪ್ರಯತ್ನದಲ್ಲಿದ್ದಾರಂತೆ. ಆತನಿಗೆ ಮುಖದ ಮೇಲೆ ಇನ್ನೂ ಸರಿಯಾಗಿ ಮೀಸೆ ಮೊಳೆತಿಲ್ಲ, ಆಗಲೇ ಬೇಡ ಎಂಬ ಮಾತುಗಳು ಕನ್ನಡ ಚಿತ್ರೋದ್ಯಮದಲ್ಲಿ ವ್ಯಕ್ತವಾಗಿವೆ. (ಏಜೆನ್ಸೀಸ್)

    English summary
    If the Kannada films grapevine is to be believed producer cum Karnataka Film Chamber of Commerce (KFCC) secretary Sa.Ra.Govindu to be introduced his son to Kannada films in B.K. Srinivas film titled as Adda.
    Monday, August 6, 2012, 17:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X