Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ ನಲ್ಲಿ 'ಕೋಟಿಗೊಬ್ಬ'ನ ದರ್ಬಾರ್ ಶುರುವಾಗುತ್ತಾ.?
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ನಿತ್ಯಾ ಮೆನನ್ ಜುಗಲ್ ಬಂದಿಯಲ್ಲಿ ಮೂಡಿಬಂದಿರುವ 'ಕೋಟಿಗೊಬ್ಬ 2' ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾದು-ಕಾದು ಸುಸ್ತಾದ್ರು. ಇದೀಗ ಅಭಿಮಾನಿಗಳ ಕುತೂಹಲಕ್ಕೆ ಬ್ರೇಕ್ ಹಾಕೋ ಸಮಯ ಹತ್ತಿರವಾಗುತ್ತಿದೆ.
ಬಹುನಿರೀಕ್ಷಿತ 'ಕೋಟಿಗೊಬ್ಬ 2' ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡದವರು ಗೊತ್ತು ಮಾಡಿದ್ದು, ಆಗಸ್ಟ್ 12 ರಂದು ಈ ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 12 ರಂದು ವರಮಹಾಲಕ್ಷ್ಮಿ ಹಬ್ಬವಿದ್ದು, ಅದೇ ದಿನದಂದು ಚಿತ್ರವನ್ನು ತೆರೆಗೆ ತರಲು ನಿರ್ಮಾಪಕ ಸೂರಪ್ಪ ಬಾಬು ತೀರ್ಮಾನ ಮಾಡಿದ್ದಾರಂತೆ.[ಧ್ವನಿಸುರುಳಿ ವಿಮರ್ಶೆ: ಸುದೀಪ್ ಅಭಿನಯದ ಕೋಟಿಗೊಬ್ಬ 2]
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಕಬಾಲಿ' ಜುಲೈ 22 ರಂದು ಇಡೀ ವಿಶ್ವದಾದ್ಯಂತ ತೆರೆ ಕಾಣುತ್ತಿರೋದು ಪಕ್ಕಾ ಆಗಿರುವುದರಿಂದ, ಸುದೀಪ್ ಅವರ 'ಕೋಟಿಗೊಬ್ಬ 2' ಚಿತ್ರವನ್ನು ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.['ಕೋಟಿಗೊಬ್ಬ 2'ನಲ್ಲಿ ಎಷ್ಟು ಹಾಡುಗಳಿವೆ, ಇಲ್ಲಿದೆ ಡೀಟೈಲ್ಸ್]
ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ತೆರೆ ಕಾಣಲಿರುವುದರಿಂದ, ಚೆನ್ನೈನಲ್ಲೂ ಸುದೀಪ್ ಅವರ 'ಮುಡಿಂಜ ಇವನ ಪುಡಿ' ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಳ್ಳಲಿದೆ.
'ಲಿಂಗಾ' ಚಿತ್ರದ ಖ್ಯಾತಿಯ ನಿರ್ದೇಶಕ ಕೆ.ಎಸ್ ರವಿಕುಮಾರ್ ಅವರು 'ಕೋಟಿಗೊಬ್ಬ 2' ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದು, ಸುದೀಪ್ ಅವರ ಕೆರಿಯರ್ ನಲ್ಲಿ ಈ ಸಿನಿಮಾ ದೊಡ್ಡ ರೆಕಾರ್ಡ್ ಸೃಷ್ಟಿ ಮಾಡಲಿದೆ ಎಂಬ ಮಾತು ಗಾಂಧಿನಗರದಲ್ಲಿ ಅಲ್ಲಲ್ಲಿ ಕೇಳಿ ಬರುತ್ತಿದೆ.[ಟೀಸರ್: ವ್ಹಾ.! ನಮ್ ಕಿಚ್ಚ ಅವ್ರುದ್ದು ಅದೇನ್ ಸ್ಟೈಲ್ ಅಂತೀರಾ]
ಇದೇ ಮೊದಲ ಬಾರಿಗೆ ಸುದೀಪ್ ಅವರ ಜೊತೆ ನಿತ್ಯಾ ಮೆನನ್ ಡ್ಯುಯೆಟ್ ಹಾಡಿದ್ದು, ಇನ್ನುಳಿದಂತೆ ರವಿಶಂಕರ್, ಪ್ರಕಾಶ್ ರೈ, ಚಿಕ್ಕಣ್ಣ, ಸಾಧು ಕೋಕಿಲಾ, ಶರತ್ ಲೋಹಿತಾಶ್ವ ಮುಂತಾದವರು ಪ್ರಮುಖ ತಾರಾಗಣದಲ್ಲಿ ಮಿಂಚಿದ್ದಾರೆ.