Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಕ್ ಗೆ ಭಾಗ್ಯ ತಂದುಕೊಡುತ್ತಾನಂತೆ ರಾಜು
ಹೊಸಬರನ್ನು ಸೇರಿಸಿಕೊಂಡು 'ಭಾಗ್ಯರಾಜ್' ಎಂಬ ವಿಭಿನ್ನ ಸಿನಿಮಾವನ್ನು ಗಾಂಧಿನಗರಕ್ಕೆ ಹೊತ್ತು ತಂದಿರುವ ನವ ನಿರ್ದೇಶಕ ದೀಪಕ್ ಮಧುವನ ಹಳ್ಳಿ ಅವರು ಹೊಸ ನಟ ಮಹೇಶ್ ಮತ್ತು 'ಪರಾರಿ' ಸಿನಿಮಾ ಖ್ಯಾತಿಯ ನಟಿ ಜಾಹ್ನವಿ ಕಾಮತ್ ಅವರನ್ನು ಸೇರಿಸಿಕೊಂಡು ಒಂದೊಳ್ಳೆ ಪ್ರಯತ್ನ ಮಾಡಿದ್ದಾರೆ.
ಲೂಸ್ ಮಾದ ಯೋಗಿ ಅವರ ಸಹೋದರ ನಟ ಮಹೇಶ್ ಅವರು ಈ ಚಿತ್ರದ ನಾಯಕರಾಗಿದ್ದು, ಜೊತೆಗೆ ತಮ್ಮ ಹೋಮ್ ಬ್ಯಾನರ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.[ಈ ವಾರ 'ಭಾಗ್ಯರಾಜ್' ನೋಡುವ ಭಾಗ್ಯ ಪ್ರೇಕ್ಷಕರಿಗೆ!]
ಹೊಸ ಕಥೆಯನ್ನು ವಿಭಿನ್ನವಾಗಿ ಪ್ರೇಕ್ಷಕರಿಗೆ ತಲುಪಿಸುವಲ್ಲಿ ನಿರ್ದೇಶಕರು ಪ್ರಯತ್ನಿಸಿದ್ದಾರೆ ಎಂಬುದು ಈಗಾಗಲೇ ಟ್ರೈಲರ್ ನಲ್ಲಿ ಗೊತ್ತಾಗಿದೆ. ಹೊಸಬರ 'ರಂಗಿತರಂಗ' ಎಂಬ ಸಿನಿಮಾ ಗಾಂಧಿನಗರಕ್ಕೆ ಬಂದು ಹೋದ ಮೇಲೆ ಹೊಸಬರ ನಸೀಬು ಚೆನ್ನಾಗಿದೆ.
ಈಗಾಗಲೇ ಟ್ರೈಲರ್ ಮೂಲಕ ಭಾರಿ ಹಿಟ್ ಆಗಿರುವ 'ಭಾಗ್ಯರಾಜ್' ಸಿನಿಮಾದ ಬಗ್ಗೆ ಸಿನಿರಸಿಕರು ಬಹಳ ಕುತೂಹಲ ಸೃಷ್ಟಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನವಾಗಿ ಚಿತ್ರದ ಪ್ರಚಾರ ಕಾರ್ಯ ಕೈಗೊಂಡಿರುವ ಹೊಸಬರ ತಂಡ ಅಭಿಮಾನಿಗಳನ್ನು ಮುಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಬರ 'ಭಾಗ್ಯರಾಜ್' ಸಿನಿಮಾಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದ್ದು, ಸಿನಿಮಾ ಫೆಬ್ರವರಿ 5ಕ್ಕೆ ಬಿಡುಗಡೆ ಆಗಲಿದೆ.
ನವ ನಿರ್ದೇಶಕ ದೀಪಕ್ ಮಧುವನ ಹಳ್ಳಿ ಅವರು ಫಿಲ್ಮಿಬೀಟ್ ಕನ್ನಡದ ಜೊತೆಗೆ ತಮ್ಮ ಚಿತ್ರದ ಬಗ್ಗೆ ಮತ್ತು ಮೊದಲ ನಿರ್ದೇಶನದ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.
ನಿರ್ದೇಶಕ ದೀಪಕ್ ಮಧುವನ ಹಳ್ಳಿ ಅವರ ಜೊತೆ ಫಿಲ್ಮಿಬೀಟ್ ಕನ್ನಡ ನಡೆಸಿದ ಎಕ್ಸ್ ಕ್ಲ್ಯೂಸಿವ್ ಸಂದರ್ಶನ ನೋಡಲು ಈ ವಿಡಿಯೋ ನೋಡಿ...