Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಿಸ್ಟರ್ & ಮಿಸಸ್ ರಾಮಾಚಾರಿ ಚಿತ್ರದ ಹಾಡುಗಳು ಹೇಗಿವೆ?
ಒಟ್ಟಾಗಿಯೇ ಚಿತ್ರರಂಗ ಪ್ರವೇಶಿಸಿ, ತಮ್ಮದೇ ಆದ ಸ್ಥಾನಗಳನ್ನು ಪಡೆದುಕೊಂಡಿರುವ ಯಶ್ ಹಾಗೂ ರಾಧಿಕ ಪಂಡಿತ್ ಅವರದ್ದು ಜೊತೆಯಾಗಿಯೂ ಯಶಸ್ವಿ ಜೋಡಿಯೇ. ಇಬ್ಬರಿಗೂ ತಮ್ಮದೇ ಆದ ಅಭಿಮಾನಿ ಪ್ರೇಕ್ಷಕ ವೃಂದವಿದ್ದು ಅದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಎಲ್ಲಾ ರೀತಿಯ ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸಬಲ್ಲ ರಾಧಿಕ ಪಂಡಿತ್ ಒಂದು ಕಡೆಯಾದರೆ, ಯುವ ಹಾಗೂ ಮಾಸ್ ಪ್ರೇಕ್ಷಕರನ್ನು ಸೆಳೆಯುತ್ತಿರುವ ಯಶ್ ಚಿತ್ರದಿಂದ ಚಿತ್ರಕ್ಕೆ ಕನ್ನಡದ ಅಗ್ರ ನಾಯಕರಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಇವರಿಬ್ಬರದ್ದು, ವಿಭಿನ್ನ ಹೆಸರುಳ್ಳ 'ಮಿಸ್ಟರ್ & ಮಿಸಸ್ ರಾಮಾಚಾರಿ' ಚಿತ್ರ ಸಹಜವಾಗಿಯೇ ಕನ್ನಡದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದು. ಹರಿಕೃಷ್ಣ ನಿರ್ದೇಶನದ ಚಿತ್ರದ ಹಾಡುಗಳು ಹೇಗಿವೆ ಎಂಬ ಕುತೂಹಲ ನಿಮ್ಮದಾಗಿದ್ದರೆ, ಒಮ್ಮೆ ಇತ್ತ ಕಣ್ಣಾಡಿಸಿ. (ರಾಮಾಚಾರಿ ಅನ್ನೋ ಹೆಸರೇ ಪ್ರಾಬ್ಲಂ)
ಯಾರಲ್ಲಿ ಸೌಂಡು ಮಾಡೋದು
ಹಾಡಿರುವವರು
:
ರಂಜಿತ್
ಸಾಹಿತ್ಯ
:
ಸಂತೋಶ್
ಆನಂದ
ರಾಮ್
ಹರಿಕೃಷ್ಣರ
ಗೀತೆಗಳಲ್ಲಿರುವ
ವಾದ್ಯ
ಸಂಯೋಜನೆ,
ಜೋಶ್
ತುಂಬಿದ
ರಿದಮ್,
ಕೋರಸ್
ಜೊತೆಗೆ
'ಎಲ್ಲೋ
ಕೇಳಿದಂತೆ
ಅನಿಸುವ
ಭಾವ'
ಎಲ್ಲವೂ
ಇರುವ
ಗೀತೆ.
ನಡುವೆ
ಬರುವ
'ಹಾವಿನ
ದ್ವೇಷ'
ಹಾಡಿನ
ಛಾಯೆಯಿಂದಾಗಿ
ಗೀತೆ
ಹೊಸ
ರೂಪ
ಪಡೆದುಕೊಳ್ಳುತ್ತದೆ.
ಸಂತೋಶ್
ಸಾಹಿತ್ಯ,
ಸಂಗೀತಕ್ಕೆ
ತಕ್ಕ
ಹಾಗಿದೆ.
ರಂಜಿತ್
ಕೂಡ
ಉತ್ತಮವಾಗಿ
ಹಾಡಿರುವುದರಿಂದ
ಹಾಡು
ಕೇಳುವಂತಿದೆ.
ರಾಮಾಚಾರಿ...
ಹಾಡಿರುವವರು
:
ಟಿಪ್ಪು
ಸಾಹಿತ್ಯ:
ಎ
ಪಿ
ಅರ್ಜುನ್
ಶೋಬಾನೆ ಶೈಲಿಯಲ್ಲಿ ವಿಭಿನ್ನವಾಗಿ ಪ್ರಾರಂಭವಾಗುವ ಗೀತೆ ಕೆಲವೇ ಕ್ಷಣದಲ್ಲೇ ಮತ್ತೆ ಹರಿಕೃಷ್ಣ, ಟಿಪ್ಪು ಅವರ usual ಸ್ಟೈಲ್ ಗೆ ಹೊರಳುತ್ತದೆ. ಲವಲವಿಕೆಯ ಸಾಹಿತ್ಯ ಹಾಗೂ ಸಂಗೀತದಿಂದ ಕೇಳಿಸಿಕೊಂಡು ಹೋಗುತ್ತದೆ. ಟಿಪ್ಪು ಈ ರೀತಿಯ ಗೀತೆಗಳಲ್ಲಿ ಎತ್ತಿದ ಕೈ ಆಗಿರುವುದರಿಂದ ಅವರ ಗಾಯನ ಬಗ್ಗೆ ಹೆಚ್ಚೇನು ಹೇಳುವಂತಿಲ್ಲ.
ಉಪವಾಸ
ಹಾಡಿರುವವರು
:
ಸೋನು
ನಿಗಂ
ಹಾಗೂ
ಶ್ರೇಯಾ
ಘೋಷಾಲ್
ಸಾಹಿತ್ಯ
:
ಗೌಸ್
ಪೀರ್
ಗಮನ ಸೆಳೆಯುವ ಸಾಹಿತ್ಯ, ಸರಳ ಹಾಗೂ ಅಬ್ಬರವಿಲ್ಲದ ಸಂಗೀತ ಈ ಗೀತೆಯ ವಿಶೇಷತೆ. ಸೋನು ನಿಗಂ ಉತ್ತಮವಾಗಿ ಹಾಡಿದ್ದರೂ ಶ್ರೇಯಾರವರ ಕಂಠಸಿರಿ ಹೆಚ್ಚು ಇಷ್ಟವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಗೀಳಾಗಿರುವ ಹಿಂದಿ ಸಾಹಿತ್ಯ, ಕೋರಸ್ ಇಲ್ಲಿಯೂ ಇದೆ. ಗೌಸ್ ಪೀರರ ಸಾಹಿತ್ಯ ವಿಭಿನ್ನವಾಗಿದ್ದು, ಮನ ಸೆಳೆಯುತ್ತದೆ.
ಏನಪ್ಪಾ
ಹಾಡಿರುವವರು
:
ಟಿಪ್ಪು
ಸಾಹಿತ್ಯ:
ಗೌಸ್
ಪೀರ್
'ಇವನು ಸನ್ನು ಅವಳು ಮೂನು ಇಬ್ಬರೂ ವೆಲ್ ನೋನ್ನು' ಎಂಬ ಸಾಲುಗಳುಳ್ಳ ಗೌಸ್ ಪೀರ್ ರ ಸಾಧರಣ ಸಾಹಿತ್ಯದ ಹಾಡು ಸಂಗೀತದಲ್ಲೂ ಅದೇ ಮಟ್ಟವನ್ನು ಉಳಿಸಿಕೊಳ್ಳುತ್ತದೆ. ಹೆಚ್ಚೇನು ಏರಿಳಿತಗಳಿಲ್ಲದ್ದರಿಂದ ಟಿಪ್ಪು ಕೂಡ ಎಂದಿನಂತೆ ಹಾಡಿದ್ದಾರೆ. ತೆರೆಯ ಮೇಲೆ ನೃತ್ಯದಿಂದಾಗಿ ಕಳೆಗಟ್ಟಬಹುದೇನೋ ಎಂಬ ಆಶಾಭಾವನೆ ಹುಟ್ಟಿಸುವ ಹಾಡಿದು.
ಕಾರ್ಮೋಡ
ಹಾಡಿರುವವರು
:
ರಾಜೇಶ್
ಕೃಷ್ಣನ್
ಸಾಹಿತ್ಯ:
ಗೌಸ್
ಪೀರ್
ಇಷ್ಟವಾಗಲು ಅನೇಕ ಕಾರಣಗಳಿರುವ ಗೀತೆ. ಅದರಲ್ಲಿ ಮೊದಲಿಗೆ, ಬಹಳ ದಿನಗಳ ನಂತರ ಕೇಳ ಸಿಗುವ ರಾಜೇಶ್ ರವರ ಕಂಠ. ರಾಜೇಶ್ ರ ಭಾವಪೂರ್ಣ ಗಾಯನ ಗೌಸ್ ಪೀರ್ ರವರ ಉತ್ತಮ ಸಾಹಿತ್ಯದ ಅರ್ಥಗಳನ್ನು ಸುಲಭವಾಗಿ ಕೇಳುಗರಿಗೆ ತಲುಪಿಸುತ್ತದೆ. ಸಂಗೀತ ಮಧುರವಾಗಿದ್ದು, ವಾದ್ಯ ಸಂಯೋಜನೆ ಸಾಹಿತ್ಯಕ್ಕೆ, ಗಾಯನಕ್ಕೆ ಅಡ್ಡ ಬರದಂತಿದೆ. ಒಂದೆರೆಡು ಕಡೆ ಸಾಹಿತ್ಯ ಹಾಗೂ ರಾಗದ ಹೊಂದಣಿಕೆಯಲ್ಲಿ ಕೊರತೆ ಕಾಣುತ್ತದೆ.
ಅಣ್ ತಮ್ಮ
ಹಾಡಿರುವವರು:
ಯಶ್
ಸಾಹಿತ್ಯ:
ಯೋಗರಾಜ್
ಭಟ್
ಇತ್ತೀಚೆನ ಗೀತೆಗಳಲ್ಲಿ 'ಅಣ್ ತಮ್ಮ' ನಂತಾಗಿರುವ ಹರಿಕೃಷ್ಣರ ಸಂಗೀತ ಹಾಗೂ ಯೋಗರಾಜ್ ಭಟ್ಟರ ಸಾಹಿತ್ಯ ಇಲ್ಲಿ ಮತ್ತೆ ಒಂದಾಗಿದೆ. ಅದರಲ್ಲೇನು ವಿಶೇಷ? ಎಂಬ ಪ್ರಶ್ನೆಗೆ 'ಯಶ್ ಗಾಯನ' ಎಂಬ ಸಿದ್ಧ ಉತ್ತರ ಈ ಗೀತೆಯ ಮೂಲಕ ಕೊಡಬಹುದು. ಸರಳವಾದ ಸಾಹಿತ್ಯ ಸಂಗೀತಕ್ಕೆ ಅಷ್ಟೇ ಸರಳವಾಗಿ ಯಶ್ ರ ಗಾಯನ ಒದಗಿ ಬಂದಿದೆ. 'ಹಂಗೂ ಹಿಂಗೂ ಹೆಂಗೋ ಇದ್ದೆ' ಎನ್ನುವ ಹಾಡಿನ ಸಾಲುಗಳನ್ನು ಯಶ್ ಚೆನ್ನಾಗಿ ನಿಭಾಯಿಸಿದ್ದಾರೆ.