Don't Miss!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ: ದುನಿಯಾ ವಿಜಿ-ಭಟ್ರ 'ಕಾವೇರಿ ಗಾನ'ದ ಸಣ್ಣ ಝಲಕ್
ಯೋಗರಾಜ್ ಭಟ್ರು ಅಂದ್ರೆ ಹಾಗೆ, ಏನಾದ್ರೂ ವಿಶೇಷತೆ ಇದ್ರೆ, ಅಥವಾ ಯಾವುದೋ ವಿಚಾರಕ್ಕೆ ಟಾಂಗ್ ಕೊಟ್ಟು, ಹಾಡೋ, ಡೈಲಾಗೋ, ಕವಿತೆನೋ ಬರೆದು ಬಿಡ್ತಾರೆ. ಭಟ್ರ ಈ ಚೇಷ್ಟೆಗೆ ದುನಿಯಾ ವಿಜಯ್ ಅವರು ಸಾಥ್ ಕೊಡ್ತಾರೆ.
ಇತ್ತೀಚೆಗಷ್ಟೇ ಪಿಯುಸಿ ವಿದ್ಯಾರ್ಥಿಗಳ ರಾಸಾಯನಿಕ ಪ್ರಶ್ನೆ ಪತ್ರಿಕೆ ಸೋರಿ ಹೋಗಿದ್ದಾಗ, ನಿರ್ದೇಶಕ ಯೋಗರಾಜ್ ಭಟ್ ಮತ್ತು ದುನಿಯಾ ವಿಜಯ್ ಅವರು ಒಂದು ವಿಶೇಷ ಹಾಡು ರಚಿಸಿ, ಬಿಡುಗಡೆ ಮಾಡಿದ್ದರು. ಭಟ್ರು ಮತ್ತು ವಿಜಿ ಹಾಡಿದ ಹಾಡು ಸಾಕಷ್ಟು ಸುದ್ದಿ ಮಾಡಿತ್ತು.[ನಟ ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ.! ಯಾರೀಕೆ.?]
ಇದೀಗ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಕೂಡ ಯೋಗರಾಜ್ ಭಟ್ರು ವಿಶೇಷ ಹಾಡು ಬರೆದಿದ್ದಾರೆ. ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಅವರು ಮ್ಯೂಸಿಕ್ ಕಂಪೋಸ್ ಮಾಡಿ, ಭಟ್ರ ಮಿರ್ಚಿಗೆ, ಇನ್ನಷ್ಟು ಮಸಾಲೆ ಬೆರೆಸಿದ್ದಾರೆ.
ಭಟ್ರ ಸಾಹಿತ್ಯಕ್ಕೆ ದುನಿಯಾ ವಿಜಿ ಅವರು ತಮ್ಮ ಧ್ವನಿ ನೀಡಿದ್ದು, ಸಖತ್ ಆಗಿ ಹಾಡಿದ್ದಾರೆ. ಈ ಹಾಡನ್ನು ವಿಜಿ ಮತ್ತು ಪ್ರಿಯಾಮಣಿ ಕಾಣಿಸಿಕೊಂಡಿರುವ 'ದನ ಕಾಯೋನು' ಚಿತ್ರದಲ್ಲಿ ಬಳಸಿಕೊಳ್ಳುತ್ತಾರಂತೆ. ಈಗಾಗಲೇ ಬಿಡುಗಡೆ ಆಗಿರುವ ಈ ವಿಡಿಯೋ ಸಾಂಗ್ ಸಾಕಷ್ಟು ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿದೆ.[ಧನ ಬೇಕು ಅಂದರೆ ಇನ್ನೊಂದಷ್ಟು ದಿನ ದನ ಕಾಯಬೇಕು!]
ದುನಿಯಾ ವಿಜಯ್ ಮತ್ತು ಯೋಗರಾಜ್ ಭಟ್ರ 'ದನ ಕಾಯೋನು' ಚಿತ್ರ ಬಿಡುಗಡೆಗೆ ತಯಾರಾಗಿದ್ದು, ದಸರಾ ಹಬ್ಬಕ್ಕೆ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಚಿತ್ರಕ್ಕೆ ಕನಕಪುರ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ.
ದುನಿಯಾ ವಿಜಿ ಮತ್ತು ಭಟ್ರ ಕಾಂಬಿನೇಷನ್ 'ಕಾವೇರಿ ನೀರು' ಹಾಡಿನ ಮೇಕಿಂಗ್ ಝಲಕ್ ಇಲ್ಲಿದೆ ನೋಡಿ....