Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ 'ರಣವಿಕ್ರಮ'ನಿಗೆ ಲಹರಿ ವೇಲು ನೋಟಿಸ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ರಣವಿಕ್ರಮ' ಚಿತ್ರ ಏಪ್ರಿಲ್ ನಲ್ಲಿ ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಆದರೆ ಈ ಚಿತ್ರದಲ್ಲಿನ ಒಂದು ರಿಮಿಕ್ಸ್ ಹಾಡು ಕಾಪಿರೈಟ್ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಲಹರಿ ಆಡಿಯೋ ಸಂಸ್ಥೆ ಚಿತ್ರದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಿಗೆ ನೋಟಿಸ್ ಕಳುಹಿಸಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ರಣರಂಗ' (1988) ಚಿತ್ರದಲ್ಲಿನ "ಜಗವೇ ಒಂದು ರಣರಂಗ..ಧೈರ್ಯ ಇರಲಿ ನಿನ್ನ ಸಂಗ..." ಎಂಬ ಗೀತೆಯ ಪಲ್ಲವಿಯ ಸಾಲುಗಳನ್ನು ಯಥಾವತ್ತಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. [ರಣವಿಕ್ರಮ ಆಡಿಯೋ ವಿಮರ್ಶೆ]
ರಣರಂಗ ಚಿತ್ರದ ಗೀತೆಗೆ ಹಂಸಲೇಖ ಅವರ ಸಾಹಿತ್ಯ ಮತ್ತು ಸಂಗೀತ ಇದೆ. ಅದೇ ಹಾಡನ್ನು ರಿಮಿಕ್ಸ್ ರೂಪದಲ್ಲಿ ರಣವಿಕ್ರಮ ಚಿತ್ರದಲ್ಲಿ ಕಾನೂನುಬಾಹಿರವಾಗಿ ಬಳಸಿಕೊಳ್ಳಲಾಗಿದೆ ಎಂದು ಲಹರಿ ವೇಲು ಆರೋಪಿಸಿದ್ದು, ಚಿತ್ರದ ನಿರ್ದೇಶಕ ಪವನ್ ಒಡೆಯರ್ ಹಾಗೂ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಅವರಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ನೋಟೀಸ್ ಜಾರಿ ಮಾಡಿದ್ದಾರೆ.
ಜಯಣ್ಣ ಮತ್ತು ಭೋಗೇಂದ್ರ ನಿರ್ಮಾಣದ ಈ ಚಿತ್ರದಲ್ಲಿ ಅಂಜಲಿ ಮತ್ತು ಆದಾ ಶರ್ಮಾ ಇಬ್ಬರು ನಾಯಕಿಯರು. ವೈದಿ ಎಸ್ ಅವರ ಛಾಯಾಗ್ರಹಣ ಇದ್ದು ಉಳಿದ ಪಾತ್ರವರ್ಗದಲ್ಲಿ ಗಿರೀಶ್ ಕಾರ್ನಾಡ್, ರಂಗಾಯಣ ರಘು, ವಿಕ್ರಮ್ ಸಿಂಗ್ ಮುಂತಾದವರಿದ್ದಾರೆ. (ಏಜೆನ್ಸೀಸ್)