Don't Miss!
- News ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ 'ಚಿಪ್ಪು' ಪೋಸ್ಟರ್ ಬಿಡುಗಡೆ: ಬಿಜೆಪಿ ತಿರುಗೇಟು
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರದ್ಧೆ ಮತ್ತು ತಾಳ್ಮೆ ಇದ್ದಲ್ಲಿ ಸಂಗೀತ ಒಲಿಯುತ್ತದೆ : ಶ್ರೀನಾಥ್
ತಾಳ್ಮೆ ಮತ್ತು ಶ್ರಧ್ಧೆ ಇದ್ದರೆ ಮಾತ್ರವೇ ಸಂಗೀತ ಸರಸ್ವತಿ ಒಲಿಯುತ್ತಾಳೆ. ಗುರುಕುಲ ಪಧ್ಧತಿಯಲ್ಲಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದವರು ಎಂದಿಗೂ ಈ ಕ್ಷೇತ್ರದಲ್ಲಿ ಗಟ್ಟಿಯಾಗಿ ಬೇರೂರುತ್ತಾರೆ ಎಂದು ಖ್ಯಾತ ಚಲನಚಿತ್ರ ನಟ ಪ್ರಣಯರಾಜ ಡಾ. ಶ್ರೀನಾಥ್ ಹೇಳಿದರು.
ಅವರು ನಗರದ ಕನ್ನಡ ಭವನದಲ್ಲಿರುವ ಕರ್ನಾಟಕ ನಾಟಕ ಅಕಾಡೆಮಿ ಚಾವಡಿಯಲ್ಲಿ ಕಿಕ್ಕಿರಿದು ಸೇರಿದ ಸಂಗೀತಾಸಕ್ತರನ್ನು ಉದ್ದೇಶಿಸಿ "ಸ್ವರಸಂಪದ" ಟ್ರಸ್ಟನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಮಾತನ್ನು ಹೇಳಿದರು.
ಮುಂದಿನ ದಿನಗಳಲ್ಲಿ ಅವರು ಮಾಡುವ ಸಂಗೀತದ ಎಲ್ಲ ಪ್ರಾಕಾರಗಳಿಗೆ ತಾನು ಹಾರ್ದಿಕವಾಗಿ ಸಹಕರಿಸುತ್ತೇನೆ ಎಂದು ಹೇಳಿದರಲ್ಲದೇ ಡಾ. ಸಂಪದ ಭಟ್ಟ ಮರಬಳ್ಳಿ ಮತ್ತು ಪ್ರಕಾಶ್ ಮರಬಳ್ಳಿ ಇವರಿಗೆ ಕಾಣಿಕೆ ನೀಡುವುದರ ಮೂಲಕ ಆಶೀರ್ವದಿಸಿದರು.
ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್, ಚಲನಚಿತ್ರ ನಟರಾದ ರಾಮಕೃಷ್ಣ, ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್, ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ದತ್ತಣ್ಣ ಮತ್ತು ನಟಿ ಗಿರಿಜಾ ಲೋಕೇಶ್ ಮುಂತಾದ ಗಣ್ಯರು ಸ್ವರಸಂಪದ ತಂಡಕ್ಕೆ ಶುಭ ಹಾರೈಸಿದರು.
ಡಾ. ಸಂಪದ ಭಟ್ಟ ಮರಬಳ್ಳಿಯವರ ಸಂಗೀತದ ಗುರುಗಳಲ್ಲೊಬ್ಬರಾದ ಹೊನ್ನಾವರದ ಪಂ. ಜಿ ಆರ್.ಭಟ್ಟರವರನ್ನು ಈ ಸಂದರ್ಭದಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದ್ದಲ್ಲದೇ ಗುರುಕಾಣಿಕೆಯನ್ನು ಸಮರ್ಪಿಸಲಾಯಿತು. ಅಧ್ಯಕ್ಷತೆಯನ್ನು ಕಾಸರಗೋಡು ಚಿನ್ನಾರವರು ವಹಿಸಿದರು. (ಒನ್ಇಂಡಿಯಾ ಕನ್ನಡ)