Don't Miss!
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಂಡ್ ಹೈಕ್ಳ 'ಡ್ರಾಮಾ' ಹಾಡುಗಳು ಸಖತ್ ಕ್ಲಿಕ್
ಯೋಗರಾಜ್ ಭಟ್ ಬಹುನಿರೀಕ್ಷೆಯ 'ಡ್ರಾಮಾ' ಚಿತ್ರದ ಆಡಿಯೋ ಬಿಡುಗಡೆ ಕಳೆದ ಮಂಗಳವಾದ ನೆರವೇರಿತು. ಈ ಮೊದಲಿನ ಭಟ್ಟರ 'ಪರಮಾತ್ಮ' ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ನಾಯಕರಾಗಿದ್ದು ಬಾಕ್ಸ್ ಆಫೀಸ್ ನಲ್ಲಿ ಚಿತ್ರ ಹಣ ಮಾಡಿದ್ದರೂ ಪ್ರೇಕ್ಷಕರು ಹಾಗೂ ವಿಮರ್ಶಕರ ದೃಷ್ಟಿಯಲ್ಲಿ ಚಿತ್ರ ಅಷ್ಟೇನೂ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಬರಲಿರುವ ಭಟ್ಟರ 'ಡ್ರಾಮಾ' ಚಿತ್ರದ ಬಗ್ಗೆ ಎಲ್ಲರಲ್ಲೂ ಭಾರಿ ಕುತೂಹಲ ಮನೆಮಾಡಿದೆ. ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಕ್ಲಿಕ್ ಆಗಿದ್ದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.
ಇತ್ತೀಚಿನ ಬಹಳಷ್ಟು ಸಿನಿಮಾಗಳಲ್ಲಿ ಯೋಗರಾಜ್ ಭಟ್ಟರ ಹಾಡು ಒಂದಂತೂ ಇದ್ದೇ ಇರುತ್ತದೆ, ಅದು ಸೂಪರ್ ಹಿಟ್ ಕೂಡ ಆಗುತ್ತದೆ. ಕಮರ್ಷಿಯಲ್ ಹಾಡುಗಳನ್ನು ಬರೆಯುವವರಲ್ಲಿ ಯೋಗರಾಜ್ ಭಟ್ ಹೆಸರು ಟಾಪ್ ನಲ್ಲಿದೆ. ಹೀಗಿರುವಾಗ ಅವರದೇ ನಿರ್ದೇಶನದ ಚಿತ್ರಗಳಲ್ಲಿನ ಹಾಡುಗಳು ಹೇಗಿರಬಹುದು ಎಂಬ ಎಲ್ಲರ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಡ್ರಾಮಾ ಹಾಡುಗಳು ಫಿಲಾಸಫಿಕಲ್ ಆಗಿವೆ, ವಿಭಿನ್ನ ಹಾಗೂ ವಿಶಿಷ್ಟವಾಗಿವೆ ಎಂಬ ಮಾತು ಕೇಳಿ ಬರುತ್ತಿದೆ.
ಬಿಡುಗಡೆಯಾಗಿರುವ ಹಾಡುಗಳ ಕುರಿತು ಅದರ ಸಂಗೀತಕ್ಕಿಂತಲೂ ಹೆಚ್ಚು ಸಾಹಿತ್ಯದ ಬಗ್ಗೆಯೇ ಚರ್ಚೆ ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಆನಂದ್ ಆಡಿಯೋ 30 ಸಾವಿರಕ್ಕೂ ಹೆಚ್ಚು ಆಡಿಯೋ ಸಿಡಿಗಳನ್ನು ಮಾರುಕಟ್ಟೆಗೆ ತಂದಿದೆ. ಅಡಿಯೋಗೆ ಭಾರೀ ಬೇಡಿಕೆ ಇದ್ದು ಮತ್ತೂ ಹೆಚ್ಚಿನ ಬೇಡಿಕೆ ಖಂಡಿತ ಎಂದಿದ್ದಾರೆ ಆನಂದ್ ಆಡಿಯೋದ ಮೋಹನ್. ಒಟ್ಟಿನಲ್ಲಿ ಅತಿ ಕಡಿಮೆ ಅವಧಿಯಲ್ಲಿ ಭಟ್ಟರ ಡ್ರಾಮಾ ಹಾಡುಗಳು ಕ್ಲಿಕ್ ಆಗಿವೆ.
ಅಂದಹಾಗೆ, ಯೋಗರಾಜ್ ಭಟ್ ನಿರ್ದೇಶನದ 'ಡ್ರಾಮಾ' ಚಿತ್ರದಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ನಾಯಕ ಹಾಗೂ ನಾಯಕಿಯರು. ಜೊತೆಗೆ ನೀನಾಸಂ ಸತೀಶ್ ಹಾಗೂ ಸಿಂಧು ಲೋಕನಾಥ್ ಪ್ರಮುಖ ಪಾತ್ರದಲ್ಲಿದ್ದಾರೆ. ಹಿರಿಯ ನಟ ಅಂಬರೀಷ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರವು ಇದೇ ತಿಂಗಳು ಕೊನೆಯೊಳಗೆ ಬಿಡುಗಡೆಯಾಗಲಿದೆ. (ಏಜೆನ್ಸೀಸ್)