Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಾಭರಣ ಪುತ್ರನ ನಿರ್ದೇಶನದಲ್ಲಿ ಹ್ಯಾಟ್ರಿಕ್ ಹೀರೋ
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ ಅವರ ಪುತ್ರ ಪನ್ನಗ ನಾಗಾಭರಣ ಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರದ ನಾಯಕ ಇನ್ಯಾರು ಅಲ್ಲ ನಮ್ಮ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ನಾಯಕಿ ಅದೇ ಮುದ್ದು ಮುಖದ ಚೆಲುವೆ ರಾಧಿಕಾ ಪಂಡಿತ್.
ಸಿನಿಮಾ ಬಗ್ಗೆ ಸಾಕಷ್ಟು ಆಸಕ್ತಿ ಇರುವ ಪನ್ನಗ ಅವರು ಚಿತ್ರ ನಿರ್ದೇಶಕನಕ್ಕೆ ಸಂಬಂಧಿಸಿದಂತೆ ಯುಎಸ್ಎನಲ್ಲಿ ತರಬೇತಿಯನ್ನೂ ಪಡೆದಿದ್ದಾರೆ. ಇವರ ಹೆಣೆದಿರುವ ರೊಮ್ಯಾಂಟಿಕ್ ಲವ್ ಸ್ಟೋರಿ ಶಿವರಾಜ್ ಕುಮಾರ್ ಅವರಿಗೂ ಸಖತ್ ಇಷ್ಟವಾಗಿದೆ. ಹಾಗಾಗಿ ಈಗ ಇಬ್ಬರೂ ಕೈಜೋಡಿಸಿದ್ದಾರೆ. ಶಿವಣ್ಣನೇ ಒಬ್ಬ ನಿರ್ಮಾಪಕರನ್ನು ಸೂಚಿಸಿದ್ದಾರೆ. ವೆಂಕಟೇಶ ಮೂರ್ತಿ ಎಂಬುವವರಿಗೆ ಕಾಲ್ ಶೀಟ್ ನೀಡಿದ್ದಾರೆ.
ಸದ್ಯಕ್ಕೆ 'ಲಕ್ಷ್ಮಿ' ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಶಿವಣ್ಣ ಆ ಚಿತ್ರದ ಬಳಿಕ ಪನ್ನಗ ಅವರ ಚಿತ್ರಕ್ಕೆ ಬಣ್ಣ ಹಚ್ಚಿಕೊಳ್ಳಲಿದ್ದಾರೆ. ಅತ್ತ ರಾಧಿಕಾ ಪಂಡಿತ್ ಅವರಿಗೂ ಕೈತುಂಬ ಅವಕಾಶಗಳು ಬಂದಿವೆ. ಧ್ರುವ ಸರ್ಜಾ ಜೊತೆ 'ಅದ್ದೂರಿ' ಹಾಗೂ ಪುನೀತ್ ರಾಜ್ ಕುಮಾರ್ ಅವರ ಜೊತೆ 'ಹುಡುಗರು' ಚಿತ್ರದಲ್ಲಿ ರಾಧಿಕಾ ಅಭಿನಯಿಸಿದ್ದಾರೆ.