Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಶೇಖರ್ ನಾಯಕನಾಗಿ ಒಮ್ಮೊಮ್ಮೆ
ಗೋಲ್ಡನ್ ಐ ಪಿಕ್ಚರ್ಸ್ ಸಂಸ್ಥೆಯ ಮೂಲಕ 'ಒಮ್ಮೊಮ್ಮೆ' ಎಂಬ ನೂತನ ಚಿತ್ರ ಆರಂಭವಾಗುತ್ತಿದೆ. 'ಪಯಣ', 'ಸಂಚಾರಿ' ಚಿತ್ರಗಳನ್ನು ನಿರ್ದೇಶಿಸಿರುವ ಕಿರಣ್ಗೋವಿ ಈ ಚಿತ್ರದ ನಿರ್ದೇಶಕರು. 'ಪಯಣ' ಚಿತ್ರದಿಂದ ರವಿಶಂಕರ್ ಅವರನ್ನು, 'ಸಂಚಾರಿ' ಚಿತ್ರದಿಂದ ಶರಣ್ ರನ್ನು ನಾಯಕರನ್ನಾಗಿ ಚಿತ್ರರಂಗಕ್ಕೆ ಪರಿಚಯಿಸಿದ ಕಿರಣ್ಗೋವಿ 'ಒಮ್ಮೊಮ್ಮೆ' ಚಿತ್ರದ ಮೂಲಕ ನಾಗಶೇಖರ್ನನ್ನು ಪೂರ್ಣಪ್ರಮಾಣದ ನಾಯಕನನಾಗಿ ಮಾಡುತ್ತಿದ್ದಾರೆ.
ಕಿರಣ್ಗೋವಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಾಗಶೇಖರ್ ಹಾಗೂ ಶಿವರಾಜ್ ಅವರೊಂದಿಗೆ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ. ಮೇ 16ರಂದು ಪ್ರಸಾದ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭವಾಗಲಿದ್ದು, ಚಿತ್ರೀಕರಣ ಜುಲೈ ಅಂತ್ಯ ಅಥವಾ ಆಗಸ್ಟ್ನಲ್ಲಿ ಪ್ರಾರಂಭವಾಗಲಿದೆ. ಮಡಿಕೇರಿಯಲ್ಲಿ 35ದಿನಗಳ ಚಿತ್ರೀಕರಣ ನಡೆಯಲಿದೆ.
ಕನ್ನಡ ಚಿತ್ರರಂಗದ 25ಜನ ನಿರ್ದೇಶಕರು ಅಭಿನಯಿಸುತ್ತಿರುವುದು ಈ ಚಿತ್ರದ ವಿಶೇಷ. ಇದ್ದಲ್ಲದೆ ಮೂರು ಪ್ರಖ್ಯಾತ ನಾಯಕಿಯರ ನಟನೆ ಕೂಡ ಈ ಚಿತ್ರಕ್ಕೆ ಲಭ್ಯವಿದೆ. ಐದು ಹಾಡುಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಅರ್ಜುನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಸತ್ಯ ಹೆಗ್ಡೆ ಛಾಯಾಗ್ರಹಣ, ಜೋನಿಹರ್ಷರ ಸಂಕಲನ ಈ ನೂತನ ಚಿತ್ರಕ್ಕಿದೆ.