Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿಗೆ ಫಿಲಂಫೇರ್ ಜೀವಮಾನ ಸಾಧನೆ ಪ್ರಶಸ್ತಿ
ಕಲಿಯುಗ ಕರ್ಣ ,ಮಳವಳ್ಳಿ ಗಂಡು , ರೆಬೆಲ್ ಸ್ಟಾರ್, ಎಂಎಚ್ ಅಮರನಾಥ್ ಉರುಫ್ ಅಂಬರೀಷ್ ಅವರು ಫಿಲಂಫೇರ್ ಜೀವಮಾನ ಸಾಧನೆ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರಶಸ್ತಿಯನ್ನು ಶುಕ್ರವಾರ ಚೆನ್ನೈನಲ್ಲಿ ಪ್ರಕಟಿಸಲಾಗಿದೆ. ಈ ಸುದ್ದಿಯನ್ನು ತಿಳಿದ ತಕ್ಷಣ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರದ ಅಂಬರೀಷ್ ಅಭಿಮಾನಿಗಳು ಸಿಹಿ ಹಂಚಿಕೊಂಡು ಸಂಭ್ರಮಿಸಿದರು ಎಂದು ಚೆನ್ನೈನ ನಮ್ಮ ಬಾತ್ಮಿದಾರ ದಟ್ಸ್ ಕನ್ನಡಕ್ಕೆ ತಿಳಿಸಿದರು.
ಮೂವತ್ತೊಂಬತ್ತು ವರ್ಷಗಳಿಂದ ಚಿತ್ರರಂಗದಲ್ಲಿರುವ ಅಂಬರೀಷ್ ತೆಲುಗು ಹಾಗೂ ತಮಿಳು ಚಿತ್ರಗಳಲ್ಲೂ ನಟಿಸಿರುವುದು ವಿಶೇಷ. ಅಂಬರೀಷ್ ಅವರಿಗೆ ಫಿಲಂ ಫೇರ್ ಜೀವಮಾನ ಸಾಧನೆ ಪ್ರಶಸ್ತಿ ಬಂದಿರುವುದಕ್ಕೆ ಅವರ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
ಸದ್ಯಕ್ಕೆ 'ವೀರ ಪರಂಪರೆ' ಚಿತ್ರದಲ್ಲಿ ಅಂಬರೀಶ್ ಅಭಿನಯಿಸುತ್ತಿದ್ದಾರೆ. ಈ ವರ್ಷ ಅಂಬಿ ಅಭಿನಯದ ಒಂದೇ ಒಂದು ಚಿತ್ರ 'ತಿಪ್ಪ್ಪಾರಳ್ಳಿ ತರ್ಲೆಗಳು' ಬಿಡುಗಡೆ ಕಂಡಿತ್ತು. ಅಂಬರೀಷ್ ಅವರಿಗೆ ಈ ಪ್ರಶಸ್ತಿ ಒಲಿದಿರುವುದು ಅವರ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ. ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿರುವ ಅಂಬರೀಷ್ ಅವರಿಗೆ ಶುಭಾಶಯಗಳು.