Don't Miss!
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಪುತ್ರ ಮುರಳಿ ಇನ್ನಿಲ್ಲ
ಭಾನುವಾರವಷ್ಟೆ ಅವರ ಮಗಳ ನಿಶ್ಚಿತಾರ್ಥ ನಡೆದಿತ್ತು. ಕನ್ನಡದ 'ಪ್ರೇಮ ಗಂಗಾ', 'ಸಂಭವಾಮಿ ಯುಗೇ ಯುಗೇ' ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಬಳಿಕ ಅವರು ಹೆಚ್ಚಾಗಿ ತಮಿಳು ಚಿತ್ರಗಳಲ್ಲಿ ತೊಡಗಿಕೊಂಡಿದ್ದರು. ತಮಿಳಿನ 'ಬಾನ ಕಾತಾಡಿ' ಅವರ ಅಭಿನಯದ ಕೊನೆಯ ಚಿತ್ರ.
ಕನ್ನಡ ಹಾಗೂ ತಮಿಳಿನಲ್ಲಿ ಅವರು 60ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡದ 'ಪ್ರೇಮ ಪರ್ವ' ಮುರಳಿ ಅಭಿನಯದ ಪ್ರಥಮ ಚಿತ್ರ. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಹಾಗೂ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ತಮಿಳಿನಲ್ಲಿ ಅವರ ಶ್ರೇಷ್ಠ ಅಭಿನಯಕ್ಕಾಗಿ ರಾಜ್ಯ ಪ್ರಶಸ್ತಿ ಒಲಿದಿತ್ತು. 'ಅಜಯ್ ವಿಜಯ್' ಚಿತ್ರದಲ್ಲೂ ಅಭಿನಯಿಸಿದ್ದಾರೆ.
ಮುರಳಿ ನಿಧನಕ್ಕೆ ಚಿತ್ರನಟಿ ಭವ್ಯಾ ಸೇರಿದಂತೆ ಸಂಗೀತ ನಿರ್ದೇಶಕ ವಿ ಮನೋಹರ್, ಹಂಸಲೇಖ ಹಾಗೂ ಕನ್ನಡ ಚಿತ್ರರಂಗದ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1983ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಪ್ರಾಥಮಿಕ ಶಿಕ್ಷಣವನ್ನು ಅವರು ಚೆನ್ನೈನಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪೂರೈಸಿದ್ದರು.
ಮುರಳಿ ಅವರು ಪುತ್ರ,ಪುತ್ರಿ ಹಾಗೂ ಪತ್ನಿಯನ್ನು ಅಗಲಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡಂತಾಗಿದೆ. ತಮ್ಮ 14ನೇ ವರ್ಷಕ್ಕೆ ಮುರಳಿ ಅವರು ತಂದೆ ಸಿದ್ದಲಿಂಗಯ್ಯ ಅವರಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು. ಅವರ ಪುತ್ರ ಅಧರ್ವ ಅವರು ನಾಯಕ ನಟನಾಗಿ ಅಭಿನಯಿಸಿದ್ದಾರೆ.
ಮುರಳಿಗೆ ಅಂತಿಮ ನಮನ