Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖಾಕಿ ಖದರ್ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಕರ್ನಾಟಕದ ವರ್ಣರಂಜಿತ ರಾಜಕಾರಣಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಲರ್ ಫುಲ್ ಇನ್ನಿಂಗ್ಸ್ ಇಂದು ಗುರುವಾರ(ಸೆ.8) ಆರಂಭವಾಯಿತು. ಖಾಕಿ ಖದರ್ನಲ್ಲಿ ಅವರು ಇಂದು ಮೈಸೂರು ರಸ್ತೆಗಿಳಿದಿದ್ದರು. ಇದೇನಿದು ಅಬಕಾರಿ ಸಚಿವರ ಹೊಸ ವೇಷ ಎಂದು ನೋಡುತ್ತಿದ್ದವರು ಕೊಂಚ ಗಲಿಬಿಲಿಗೊಂಡರು.
ಆದರೆ ಅವರ ಗಲಿಬಿಲಿ, ಗೊಂದಲ ಕೊಂಚ ಸಮಯದಲ್ಲೇ ನಿವಾರಣೆಯಾಯಿತು. ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಭೀಮಾ ತೀರದಲ್ಲಿ' ಶೂಟಿಂಗ್ ಇದು ಎಂದು ಗೊತ್ತಾಗಲು ಜಾಸ್ತಿ ಸಮಯ ಹಿಡಿಸಲಿಲ್ಲ.
ಚಿತ್ರದಲ್ಲಿ ಅವರು ಪೊಲೀಸ್ ಡಿಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ದಿನದ ಚಿತ್ರೀಕರಣಕ್ಕಾಗಿ ಅವರು ಇಂದು ಬಣ್ಣ ಹಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರೈಮರಿ ಸ್ಕೂಲ್ನಿಂದಲೂ ನಾನು ನಾಟಕಗಳನ್ನು ಆಡುತ್ತಿದೆ. ಬಣ್ಣದ ಜಗತ್ತಿನ ನಂಟು ತಮ್ಮನ್ನು ಇಲ್ಲಿಯವರೆಗೂ ಕರೆತಂದಿದೆ ಎಂದರು.
ಅಣಜಿ ನಾಗರಾಜ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಭೀಮಾ ತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ ಚಂದಪ್ಪ ಹರಿಜನ ಜೀವನ ಕಥೆಯನ್ನಾಧರಿಸಿದ ಚಿತ್ರವಿದು. ಪ್ರಣೀತಾ ಹಾಗೂ ಪ್ರಜ್ವಲ್ ಪೂವಯ್ಯ ಚಿತ್ರದ ಇಬ್ಬರು ನಾಯಕಿಯರು. (ದಟ್ಸ್ಕನ್ನಡ ಸಿನಿವಾರ್ತೆ)