Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತಪ್ರಿಯ ಚಿಕಿತ್ಸೆಗೆ ಬಿಬಿಎಂಪಿ ರು.1 ಲಕ್ಷ ಚೆಕ್
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ಗೀತಸಾಹಿತಿ ಗೀತಪ್ರಿಯ (81) ಅವರ ಚಿಕಿತ್ಸೆಗೆ ಎಲ್ಲಡೆಯಿಂದಲೂ ಧನಸಹಾಯ ಹರಿದುಬರುತ್ತಿದೆ. ಮೊನ್ನೆ ಮೊನ್ನೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರು.1.50 ಲಕ್ಷ ಧನ ಸಹಾಯ ನೀಡಲಾಗಿದೆ. ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೂ ಗೀತಪ್ರಿಯ ಚಿಕಿತ್ಸೆಗೆ ರು.1 ಲಕ್ಷ ಧನ ಸಹಾಯ ನೀಡಿದೆ.
ಬಿಬಿಎಂಪಿಯ ಉಪ ಮೇಯರ್ ಎಸ್ ಹರೀಶ್ ಅವರು ಒಂದು ಲಕ್ಷ ರುಪಾಯಿಗಳ ಚೆಕ್ ಅನ್ನು ಗೀತಪ್ರಿಯ ದಂಪತಿಗೆ ಹಸ್ತಾಂತರಿಸಿದರು. ಮಹಾಲಕ್ಷ್ಮಿ ಬಡಾವಣೆಯ ಗೀತಪ್ರಿಯ ನಿವಾಸಕ್ಕೆ ಭೇಟಿ ನೀಡಿ ಚೆಕ್ ವಿತರಿಸಲಾಯಿತು. ಗೀತಪ್ರಿಯ ಅವರು ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆಪರೇಷನ್ ಕಾರಣದಿಂದಾಗಿ ಮಾತಾಡಲು ಬಾಯಿ ತೆಗೆದರೂ ಮಾತೇ ಹೊರಡದಂತಹ ಪರಿಸ್ಥಿತಿ ಅವರದು.
ವರನಟ ಡಾ.ರಾಜ್ಕುಮಾರ್ ಅವರ 'ಮಣ್ಣಿನ ಮಗ' ಸೇರಿದಂತೆ ಹಲವು ಉತ್ತಮ ಚಿತ್ರಗಳನ್ನು ಗೀತಪ್ರಿಯ ಅವರು ಕೊಟ್ಟಿದ್ದಾರೆ. ಅವರ ಸಾಮಾಜಿಕ ಕಳಕಳಿ ಸ್ಮರಣಾರ್ಹ ಎಂದಿರುವ ಹರೀಶ್, ಕನ್ನಡ ಚಿತ್ರೋದ್ಯಮವೂ ಅವರ ಚಿಕಿತ್ಸೆಗೆ ನೆರವಾಗಲಿ ಎಂದಿದ್ದಾರೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದ್ದಾರೆ. (ಒನ್ಇಂಡಿಯಾ ಕನ್ನಡ)