Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರ ವಿಷ್ಣು ಸ್ಮಾರಕ ನಿರ್ಮಿಸಲು ದೇವೇಗೌಡ ಒತ್ತಾಯ
ಅಭಿನಯಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋದಲ್ಲೇ ನಿರ್ಮಿಸಬೇಕು. ಸ್ಮಾರಕ ನಿರ್ಮಿಸಲು ಉಂಟಾಗಿರುವ ತೊಡಕುಗಳನ್ನು ಪರಿಹರಿಸಿ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕವನ್ನು ನಿರ್ಮಿಸಲು ಸರ್ಕಾರ ಮುಂದಾಗ ಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಪ್ರಶಾಂತನಗರದಲ್ಲಿ ಅಭಿನಯಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ನೂತನವಾಗಿ ನಿರ್ಮಿಸಿರುವ ವಿಷ್ಣುವರ್ಧನ್ ಪುತ್ಥಳಿಯನ್ನು ಬಿಡುಗಡೆ ಮಾಡುತ್ತಾ ದೇವೇಗೌಡರು ಮಾತನಾಡುತ್ತಿದ್ದರು. ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಭಾವನಾತ್ಮಕ ಪ್ರಶ್ನೆ. ಅದನ್ನು ಯಾವುದೇ ಕಾರಣಕ್ಕೂ ಮೈಸೂರಿನಲ್ಲಿ ನಿರ್ಮಿಸಬಾರದು ಎಂದರು.
ಸ್ಮಾರಕಕ್ಕೆ ಸರಕಾರ ಈಗಾಗಲೆ ರು.5 ಕೋಟಿಯನ್ನು ಬಿಡುಗಡೆ ಮಾಡಿದೆ. ಹತ್ತು ಕೋಟಿ ಆದರೂ ಪರ್ವಾಗಿಲ್ಲ ಸ್ಮಾರಕವನ್ನು ಮಾತ್ರ ಅಭಿಮಾನ್ ಸ್ಟುಡಿಯೋದಲ್ಲಿಯೇ ನಿರ್ಮಿಸಬೇಕು. ಸ್ಮಾರಕ ಸ್ಥಾಪನೆಗೆ ಸರಕಾರ ಅನುಸರಿಸುತ್ತಿರುವ ವಿಳಂಬ ನೀತಿ ಸರಿಯಲ್ಲ. ಈ ಸಂಬಂಧ ಸಿಎಂಗೆ ಪತ್ರ ಬರೆಯಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗೌಡರಿಗೆ ಒಂದು ಪ್ರಶ್ನೆ ತೂರಿಬಂತು, ಚಿಕ್ಕಮಗಳೂರು ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಮಹಾನ್ ಕಲಾವಿದ ವಿಷ್ಣುವರ್ಧನ್ ಅವರ ಸ್ಮರಣೆಯ ಈ ಸಂದರ್ಭದಲ್ಲಿ ರಾಜಕೀಯ ಮಾತನಾಡುವುದಿಲ್ಲ ಎಂದರು. ಸಮಾರಂಭದಲ್ಲಿ ನಟ ಅನಿರುದ್ಧ್ ಉಪಸ್ಥಿತರಿದ್ದರು.
ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣು ಸ್ಮಾರಕದ ಜಾಗ ಕೌಟುಂಬಿಕ ವ್ಯಾಜ್ಯಗಳಿಗೆ ಸಿಲುಕಿದ್ದು ಅದು ಶೀಘ್ರ ಪರಿಹಾರವಾಗುವ ಸೂಚನೆಗಳಿಲ್ಲ. ಹಾಗಾಗಿ ತಾವು ವಿಷ್ಣು ಸ್ಮಾರಕವನ್ನು ಮೈಸೂರಿನಲ್ಲಿ ಸ್ಥಾಪಿಸುತ್ತೇನೆ ಎಂದು ಭಾರತಿ ವಿಷ್ಣುವರ್ಧನ್ ಕೆಲ ದಿನಗಳ ಹಿಂದೆ ಹೇಳಿದ್ದರು. ಈಗ ದೇವೇಗೌಡರ ಅಭಿಮಾನ್ ಸ್ಟುಡಿಯೋದಲ್ಲೇ ಸ್ಥಾಪನೆಯಾಗಲಿ ಎಂದಿರುವುದು ವಿಶೇಷ. (ಏಜೆನ್ಸೀಸ್)