Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲಾವಿದರ ಸಂಘಕ್ಕೆ ದರ್ಶನ್ ರು.25 ಲಕ್ಷ ಧನ ಸಹಾಯ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಲನಚಿತ್ರ ಕಲಾವಿದರ ನೆರವಿಗೆ ಧಾವಿಸಿ ಬಂದಿದ್ದಾರೆ. ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ದೃಷ್ಟಿಯಿಂದ ರು.25 ಲಕ್ಷ ದಾನ ಮಾಡುವುದಾಗಿ ದರ್ಶನ್ ಪ್ರಕಟಿಸಿದ್ದಾರೆ.
ಅನೇಕ ವರ್ಷಗಳಿಂದ ಕನ್ನಡ ಚಲನಚಿತ್ರೋದ್ಯಮದಲ್ಲಿದ್ದುಕೊಂಡೂ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಕಲಾವಿದರ ಕ್ಷೇಮಾಭಿವೃದ್ಧಿಗಾಗಿ ರಾಜ್ಯ ಸರಕಾರ ರು.50 ಲಕ್ಷಗಳನ್ನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಗೆ ನೆರವು ನೀಡಲು ದರ್ಶನ್ ಕೂಡ ಮುಂದೆ ಬಂದಿದ್ದಾರೆ.
ಸರಕಾರ ನೀಡಿರುವ ರು.50 ಲಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನಾನೂ ಕೂಡ ಅದರಲ್ಲಿ ಅರ್ಧದಷ್ಟು ಹಣವನ್ನು, ಅಂದರೆ ರು.25 ಲಕ್ಷಗಳನ್ನು ನೀಡುತ್ತಿರುವುದಾಗಿ ದರ್ಶನ್ ತಿಳಿಸಿದ್ದಾರೆ. ನಟ ದರ್ಶನ್ ಅವರನ್ನು ಆದರ್ಶವಾಗಿ ತೆಗೆದುಕೊಂಡು ಉಳಿದ ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಕೈಲಾದ ಧನಸಹಾಯನ್ನು ಕಲಾವಿದರ ಸಂಘಕ್ಕೆ ಮಾಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ ವಿ ಚಂದ್ರಶೇಖರ್ ಮನವಿ ಮಾಡಿದ್ದಾರೆ. (ಒನ್ಇಂಡಿಯಾ ಕನ್ನಡ)