Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 32 ಹೆಸರಾಂತ ನಿರ್ದೇಶಕರೊಂದಿಗೆ ಒಮ್ಮೊಮ್ಮೆ
ಗೋಲ್ಡನ್ ಐ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ 'ಒಮ್ಮೊಮ್ಮೆ' ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಸಾದ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಆರಂಭವಾಗಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ಬಾಬು ಹಾಗೂ ಉದ್ಯಮದ ಹಲವು ಗಣ್ಯರು ಅಂದಿನ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಕಿರಣ್ಗೋವಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದು, ನಾಗಶೇಖರ್ ಹಾಗೂ ಶಿವರಾಜ್ ಅವರೊಂದಿಗೆ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ. ವಿಭಿನ್ನ ಕಥಾ ಹಂದರವುಳ್ಳ ಈ ಚಿತ್ರದಲ್ಲಿ ನಾಗಶೇಖರ್ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರ ಚಾರ್ಲ್ಚಾಪ್ಲಿನ್ ತರಹ. ಎಲ್ಲರನ್ನು ನಗಿಸಿ ತಾನು ಅಳುವ ಪಾತ್ರ ಎಂದು ನಾಗಶೇಖರ್ ತಮ್ಮ ಪಾತ್ರದ ವಿವರಣೆ ನೀಡಿದ್ದಾರೆ. ರಾಗಿಣಿ ಹಾಗೂ ಜನ್ನಿಫರ್ ಕೊತ್ವಾಲ್ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ. ಇನ್ನೊಬ್ಬ ನಾಯಕಿಯ ಆಯ್ಕೆ ನಡೆಯುತ್ತಿದೆ.
ಎಸ್.ವಿ.ರಾಜೇಂದ್ರಸಿಂಗ್ಬಾಬು, ಜೋಸೈಮನ್, ಪ್ರೇಮ್, ದಿನಕರ್ ತೂಗುದೀಪ್, ಅರ್ಜುನ್ ಸೇರಿದಂತೆ ಕನ್ನಡ ಚಿತ್ರರಂಗದ 32 ಜನ ಹೆಸರಾಂತ ನಿರ್ದೇಶಕರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದಂದು ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ' ಬಿಡುಗಡೆಯಾಗುತ್ತಿದೆ. ಅದೇ ದಿನ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಸತ್ಯ ಹೆಗ್ಡೆ ಛಾಯಾಗ್ರಹಣ, ಜೋನಿಹರ್ಷರ ಸಂಕಲನ ಈ ನೂತನ ಚಿತ್ರಕ್ಕಿದೆ.