Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾಜಾ ಕತೆಯೊಂದಿಗೆ ಮರಳಿದ ಜೇಕಬ್ ವರ್ಗೀಸ್
ಕನ್ನಡ ಚಿತ್ರರಂಗದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಜೇಕಬ್ ವರ್ಗೀಸ್ ಸ್ವಲ್ಪ ಗ್ಯಾಪ್ನ ಬಳಿಕ ಮತ್ತೊಂದು ತಾಜಾ ಚಿತ್ರಕತೆಯೊಂದಿಗೆ ಮರಳಿದ್ದಾರೆ. ಈ ಬಾರಿ ಅವರು ಪ್ರೀತಿ ಪ್ರೇಮದ ಕಥನಕ್ಕೆ ಶರಣೆಂದಿದ್ದಾರೆ. ಈ ಹಿಂದೆ ಅವರ ನಿರ್ದೇಶನದಲ್ಲಿ ಬಂದಂತಹ 'ಸವಾರಿ' (ರೀಮೇಕ್) ಹಾಗೂ 'ಪೃಥ್ವಿ' (ಸ್ವಮೇಕ್) ಚಿತ್ರಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು.
ಬಳ್ಳಾರಿ ಗಣಿ ಮಾಫಿಯಾ ಬಗ್ಗೆ ಬೆಳಕು ಚೆಲ್ಲುವ 'ಪೃಥ್ವಿ' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಐಎಎಸ್ ಅಧಿಕಾರಿಯಾಗಿ ಖಡಕ್ ಅಭಿನಯ ನೀಡಿದ್ದರು. ಈ ಬಾರಿಯೂ ಪುನೀತ್ ಅವರನ್ನೆ ತಮ್ಮ ಚಿತ್ರಕ್ಕೆ ನಾಯಕ ನಟ ಅಂದುಕೊಂಡಿದ್ದರಂತೆ. ಆದರೆ ಪುನೀತ್ ಡೇಟ್ಸ್ ಸಿಗದೆ ಈಗವರು ಹೊಸಬರಿಗೆ ಬಲೆ ಬೀಸಿದ್ದಾರೆ.
ಇದಕ್ಕಾಗಿ ಅವರು ಬೆಂಗಳೂರು ಹಾಗೂ ಮೈಸೂರಿನಲ್ಲಿ ಆಡಿಷನ್ ಕೂಡ ನಡೆಸಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ಪ್ರತಿಭೆಯನ್ನು ಪರಿಚಯಿಸುವ ಸನ್ನಾಹದಲ್ಲಿದ್ದಾರೆ ಜೇಕಬ್. ಇದೇ ಚಿತ್ರವನ್ನು ತೆಲುಗಿನಲ್ಲಿ ಮಾಡುವ ಉದ್ದೇಶ ಜೇಕಬ್ ಅವರಿಗಿದೆ. ಚಿತ್ರದ ಸಂಪೂರ್ಣ ವಿವರಗಳು ಇನ್ನಷ್ಟೆ ಹೊರಬೀಳಬೇಕು. (ದಟ್ಸ್ಕನ್ನಡ ಸಿನಿವಾರ್ತೆ)