Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರ್ ಲ್ಯಾಂಪ್ಸ್ ಬಳಿ 'ಜಾನೂ' ಯಶ್, ದೀಪಾ
ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಜಾನೂ ಚಿತ್ರ ಚಿತ್ರೀಕರಣ ಮುಗಿಸಿದೆ. ಜಯಂತ್ ಕಾಯ್ಕಿಣಿ ಬರೆದಿರುವ 'ನೀನೆ ನನ್ನ ಸವಿಗನಸು...ಬೇಗ ಬಂದು ಉಪಚರಿಸು ಜಾನೂ ಮೇರಿ ಜನೂ' ಎಂಬ ಗೀತೆಯ ಚಿತ್ರೀಕರಣ ಮುರಳಿ ನೃತ್ಯ ಸಂಯೋಜನೆಯಲ್ಲಿ 'ಮೈಸೂರ್ ಲ್ಯಾಂಪ್ಸ್' ನಲ್ಲಿ ಹಾಕಲಾಗಿದ್ದ ವಿಶೇಷ ಸೆಟ್ ನಲ್ಲಿ ನಡೆಯಿತು.
"ಇದರೊಂದಿಗೆ ಜಾನೂ ಚಿತ್ರ ಚಿತ್ರೀಕರಣ ಮುಕ್ತಾಯವಾಯ್ತು, ಚಿತ್ರ ಮೇ ತಿಂಗಳಲ್ಲಿ ತೆರೆಗೆ ಬರಲಿದೆ" ಎಂದಿದ್ದಾರೆ ನಿರ್ದೇಶಕ ಪ್ರೀತಂ ಗುಬ್ಬಿ. ಯಶ್ ನಾಯಕತ್ವದ ಈ ಚಿತ್ರದಲ್ಲಿ 'ಸಾರಥಿ' ಹಾಗೂ ಪರಮಾತ್ಮ ಬೆಡಗಿ ದೀಪಾ ಸನ್ನಿಧಿ ನಾಯಕಿ. ಈ ಚಿತ್ರಕ್ಕೆ "ಏನ್ ಸಮಾಚಾರ ರೀ ಎಲ್ಲರೂ ಹೇಗಿದ್ದೀರಿ..." ಎಂಬ ಹಾಡೊಂದನ್ನು ಯೋಗರಾಜ ಭಟ್ ಬರೆದಿದ್ದಾರೆ.
ನಾಯಕಿ ದೀಪಾಸನ್ನಿಧಿ 'ಹುಬ್ಬಳ್ಳಿ ಹುಡುಗಿ' ಪಾತ್ರ ನಿರ್ವಹಿಸಿದ್ದಾರೆ. ರಂಗಾಯಣ ರಘು, ಸಂಗೀತಾ, ಶೋಭರಾಜ್, ಲಯೇಂದ್ರ ಮುಂತಾದವರು ತಾರಾಗಣದಲ್ಲಿದ್ದಾರೆ. ಸಾಧುಕೋಕಿಲಾ ಹಾಸ್ಯ ಚಿತ್ರಕ್ಕೆ ಬೋನಸ್ ಎಂದಿದ್ದಾರೆ ಪ್ರೀತಂ ಗುಬ್ಬಿ. ನಿರ್ದೇಶಕ ಪ್ರೀತಂ ಗುಬ್ಬಿಯೇ ಜಾನೂ ಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. (ಒನ್ ಇಂಡಿಯಾ ಕನ್ನಡ)