Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ಕನ್ನಡದಲ್ಲಿ ಯಾವ್ಯಾವ ಚಿತ್ರಗಳು ರಿಲೀಸ್?
ಪ್ರತಿವಾರದಂತೆ ಈ ವಾರವೂ ಸ್ಯಾಂಡಲ್ ವುಡ್ ನಲ್ಲಿ ಸಿನಿಮೋತ್ಸವ. ಒಂದಲ್ಲ ಎರಡಲ್ಲ ಬರೋಬ್ಬರಿ 5 ಚಿತ್ರಗಳು ಒಟ್ಟಿಗೆ ತೆರೆಗೆ ಬರಲು ಸಿದ್ದವಾಗಿದ್ದವು. ಆದ್ರೆ, ಕೊನೆ ಕ್ಷಣದಲ್ಲಿ ಎರಡು ಚಿತ್ರ ಮುಂದಕ್ಕೆ ಹೋಗಿದೆ.
ಸಸ್ಪೆನ್ಸ್, ಥ್ರಿಲ್ಲಿಂಗ್, ಲವ್, ಸಾಮಾಜಿಕ ಚಿತ್ರಗಳು ಸೇರಿದಂತೆ ಎಲ್ಲ ಬಗೆಯ ಪ್ರೇಕ್ಷಕರನ್ನ ರಂಜಿಸಲು ಸ್ಯಾಂಡಲ್ ವುಡ್ ಸಿದ್ದವಾಗಿದೆ. ಅನೂಪ್ ರೇವಣ್ಣ ಅಭಿನಯದ 'ಪಂಟ' ಜೊತೆ ಬೇರೆ ಯಾವ ಸಿನಿಮಾಗಳು ಬರುತ್ತಿವೆ ಎಂಬ ಮಾಹಿತಿ ಇಲ್ಲಿದೆ.
ಅನೂಪ್ ಅಭಿನಯ 'ಪಂಟ'
ಅನೂಪ್ ರೇವಣ್ಣ ಅಭಿನಯದ ಎರಡನೇ ಚಿತ್ರ 'ಪಂಟ' ಈ ವಾರ ಗಾಂಧಿನಗರಕ್ಕೆ ಎಂಟ್ರಿ ಕೊಡುತ್ತಿದೆ. ಈಗಾಗಲೇ ಟ್ರೈಲರ್ ಮೂಲಕ ಕುತೂಹಲ ಹುಟ್ಟಿಹಾಕಿರುವ 'ಪಂಟ', ಸಸ್ಪೆನ್ಸ್ ಥ್ರಿಲ್ಲಿಂಗ್ ಸಿನಿಮಾ. ಈ ಚಿತ್ರವನ್ನ ಕಲಾ ಸಾಮ್ರಾಟ್ ಎಸ್.ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸುಮ್ರಮಣ್ಯಂ.ಕೆ ಈ ಚಿತ್ರವನ್ನ ನಿರ್ಮಾಣ ಮಾಡಿದ್ದು, ರಿತೀಕ್ಷ ಚಿತ್ರದ ನಾಯಕಿಯಾಗಿದ್ದಾರೆ.
ಹೊಸಬರ 'ಪ್ರೀತಿ ಪ್ರೇಮ'
ಕೃಷ್ಣ ಚೈತನ್ಯ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ 'ಪ್ರೀತಿ-ಪ್ರೇಮ' ಚಿತ್ರವೂ ಈ ವಾರ ಬೆಳ್ಳಿ ತೆರೆಗೆ ಬರುತ್ತಿದೆ. ಕಾಶಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ಬಿ.ಜೆ ಭರತ್ ಸಂಗೀತ ನೀಡಿದ್ದಾರೆ. ನಿರ್ಮಾಣದ ಜೊತೆ ಕೃಷ್ಣ ಚೈತನ್ಯ ಈ ಚಿತ್ರದ ನಾಯಕನಾಗಿ ನಟಿಸಿದ್ದು, ನಿಧಿ ಕುಶಾಲಪ್ಪ ನಾಯಕಿಯಾಗಿದ್ದಾರೆ. ಉಳಿದಂತೆ ಟೆನ್ನಿಸ್ ಕೃಷ್ಣ, ಗಿರಿ, ಗಿರೀಶ್ ವೈದ್ಯನಾಥ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
ಸುರೇಶ್ ಹೆಬ್ಳಿಕರ್ ಅವರ 'ಮನಮಂಥನ'
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕರಾಗಿರುವ ಸುರೇಶ್ ಹೆಬ್ಳಿಕರ್ ಆಕ್ಷನ್ ಕಟ್ ಹೇಳಿರುವ 'ಮನಮಂಥನ' ಚಿತ್ರ ಇದೇ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಅತ್ಯುತ್ತಮ ಪೋಷಕ ನಟನೆಗಾಗಿ ರಮೇಶ್ ಭಟ್ ಅವರಿಗೆ 2015-2016ನೇ ರಾಜ್ಯ ಪ್ರಶಸ್ತಿ ಸಿಕ್ಕಿದೆ. ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ ಕಥೆಯಾಗಿದ್ದು, ಕಾಲೇಜ್ ವಿದ್ಯಾರ್ಥಿಗಳಿಗೆ ಮೆಚ್ಚುಗೆಯಾಗುವ ಚಿತ್ರಕಥೆ ಇದಾಗಿದೆ. ಸುರೇಶ್ ಹೆಬ್ಳಿಕರ್, ರಮೇಶ್ ಭಟ್, ಕಿರಣ್ ರಜಪೂತ್, ಅರ್ಪಿತಾ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.
ಮುಂದಕ್ಕೆ ಹೋದ 2 ಚಿತ್ರಗಳು
ಸೆನ್ಸಾರ್ ಮಂಡಳಿ ಸಿನಿಮಾ ನೋಡದ ಕಾರಣ ಹರ್ಷ ಅಭಿನಯದ 'ವರ್ಧನ' ಹಾಗೂ 'ಶ್ರೀನಿವಾಸ ಕಲ್ಯಾಣ' ಚಿತ್ರಗಳು ಮುಂದಕ್ಕೆ ಹೋಗಿದೆ. ಈ ಎರಡು ಚಿತ್ರಗಳು ಈ ವಾರ ಬಿಡುಗಡೆಯಾಗಬೇಕಿತ್ತು. ಚಿತ್ರಮಂದಿರಗಳನ್ನ ಕೂಡ ಕಾಯ್ದಿರಿಸಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಪೋಸ್ಟ್ ಪೋನ್ ಮಾಡಿಕೊಂಡಿದೆ.
ನಿಮ್ಮ ಆಯ್ಕೆ ಯಾವುದು?
ಹೀಗಾಗಿ, ಈ ವಾರ ಮೂರು ಸಿನಿಮಾಗಳು ಖಚಿತವಾಗಿದ್ದು, ಮತ್ತೆರೆಡು ಚಿತ್ರಗಳು ರೇಸ್ ನಿಂದ ಹಿಂದೆ ಸರಿದಿವೆ. ಈ ವಾರ ನೀವು ಸಿನಿಮಾ ನೋಡಬೇಕು ಎಂದು ಕೊಂಡಿದ್ದರೇ, ಯಾವ ಚಿತ್ರಕ್ಕೆ ಹೋಗುತ್ತೀರಾ ಎಂದು ಕೆಳಗೆ ನೀಡಿರುವ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ತಿಳಿಸಿ.