Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೂರೊಂದು ನೆನಪು'ಗಳಲ್ಲಿ ಚೇತನ್-ಮೇಘನಾ ರಾಜ್
ಆ ದಿನಗಳು ಚೇತನ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. 'ನೂರೊಂದು ನೆನಪು' ಚಿತ್ರದ ಮೂಲಕ ಮೇಘನಾ ರಾಜ್ ಜೊತೆ ಮತ್ತೆ ಬರ್ತಿದ್ದಾರೆ.
'ನೂರೊಂದು ನೆನಪು' ಎದೆಯಾಳದಿಂದ, ಹಾಡಾಗಿ ಬಂತು ಆನಂದದಿಂದ'......'ಬಂಧನ' ಸಿನಿಮಾದ ಈ ಹಾಡು ಈಗ ಚಿತ್ರದ ಶೀರ್ಷಿಕೆಯಾಗಿದೆ. ಕನ್ನಡದಲ್ಲಿ 'ನೂರೊಂದು ನೆನಪು' ಅಂತ ಹೊಸ ಸಿನಿಮಾ ಮೂಡಿಬರ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
ಇತ್ತೀಚಿಗೆ ಅಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ 'ನೂರೊಂದು ನೆನಪು' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ನಟ-ನಟಿಯರ ಜೊತೆ ನಿರ್ದೇಶಕ-ನಿರ್ಮಾಪಕರು ಭಾಗಿಯಾಗಿದ್ದರು.
'ನೂರೊಂದು ನೆನಪು' ಚಿತ್ರದಲ್ಲಿ 'ಆ ದಿನಗಳು' ಖ್ಯಾತಿಯ ಚೇತನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚೇತನ್ ಗೆ ಜೋಡಿಯಾಗಿ ನಟಿ ಮೇಘನಾ ರಾಜ್ ಸಾಥ್ ಕೊಟ್ಟಿದ್ದಾರೆ. ಇಷ್ಟು ದಿನ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನಟ ಚೇತನ್, 'ನೂರೊಂದು ನೆನಪು' ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.[ಮತ್ತೆ ಬಣ್ಣ ಹಚ್ಚಲು ಬಂದ್ರು 'ಮೈನಾ' ಚೇತನ್, ಇಷ್ಟು ದಿನ ಎಲ್ಲಿದ್ರು.?]
'ಫ್ಲೈ' ಚಿತ್ರದ ಮೂಲಕ ನಾಯಕ ನಟನಾಗಿ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜ್ ವರ್ಧನ್, 'ನೂರೊಂದು ನೆನಪು' ಚಿತ್ರದ ಮತ್ತೊಬ್ಬ ನಾಯಕ. ಚಿತ್ರದಲ್ಲಿ ರಾಜ್ ವರ್ಧನ್ ಗೆ ಸುಶ್ಮಿತಾ ಜೋಶಿ ಅರ್ಚನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.[ಯಶಸ್ಸು ಅಂದ್ರೆ 6 ತಿಂಗಳಿಗೊಂದು ಸಿನಿಮಾ ಮಾಡೋದಲ್ಲ: ಮೇಘನಾ]
ಅಂದ್ಹಾಗೆ, 'ನೂರೊಂದು ನೆನಪು, ಸುಹಾಸ್ ಶಿವಾಲ್ಕರ್ ಅವರು ರಚಿಸಿರುವ ಮರಾಠಿಯ 'ದುನಿಯಾದ್ರಿ' ಎಂಬ ಕಾದಂಬರಿ ಆಧಾರಿತ ಸಿನಿಮಾ. 80 ರ ದಶಕದ ಕಥಾಹಂದರವನ್ನ ಈ ಚಿತ್ರ ಹೊಂದಿದ್ದು, ಅಂದಿನ ಕಾಲಘಟ್ಟದ ಕಾಲೇಜು ದಿನಗಳನ್ನ ನೆನಪಿಸುವಂತಹ ಚಿತ್ರಕಥೆ ಇರಲಿದೆಯಂತೆ.
ಈ ಚಿತ್ರಕ್ಕೆ ಕುಮಾರೇಶ್ ಎಂಬುವರು ಆಕ್ಟನ್ ಕಟ್ ಹೇಳುತ್ತಿದ್ದು, ಇದು ಇವರಿಗೆ ಚೊಚ್ಚಲ ಚಿತ್ರ. ಸೂರಜ್ ದೇಸಾಯಿ, ಮನೀಶ್ ದೇಸಾಯಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಸದ್ಯ, ಚಿತ್ರದ 70 ರಷ್ಟು ಭಾಗ ಚಿತ್ರೀಕರಣ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆಯಂತೆ.