Don't Miss!
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ಮೊದಲ ಹಾರರ್ ತ್ರಿಡಿ ಚಿತ್ರ 'ಆಕ್ರಮಣ'
'ಆಕ್ರಮಣ' ಕನ್ನಡ ಸಿನೆಮಾ ಒಂದು ಪರಾಕ್ರಮ ಸಾಧಿಸಿದ. ತಮ್ಮ ಚೊಚ್ಚಲ ನಿರ್ದೇಶನದಲ್ಲಿ '3ಡಿ ಹಾಗೂ 2ಡಿ' ತಂತ್ರಜ್ಞಾನದ ಸಿನೆಮಾ ನಿರ್ದೇಶನ ಮಾಡಿದವರು ನಿರ್ದೇಶಕ ಪ್ರಾಶಾಂತ್ ಕುಮಾರ್ ಎನ್. ಈಗ ಅವರ ಸಿನೆಮಾ 25 ನಿಮಿಷಗಳ ಗ್ರಾಫಿಕ್ಸ್ ಬಳಕೆಗೆ ಸಿದ್ಧವಾಗಿದೆ.
ಹಾರರ್ ಅಂಶಗಳನ್ನು ಈ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ಅಳವಡಿಸಿಕೊಂಡಿರುವುದು ಚಿತ್ರಕ್ಕೆ ಇನ್ನಷ್ಟು ಮೆರುಗು ನೀಡಿದೆ. ವಿಮಲ್ ಜೈನ್, ಸುರೇಶ್ ಜೈನ್, ಪರಮೇಶ್ ಜೊತೆ ಸೇರಿ ಪ್ರಶಾಂತ್ ಕುಮಾರ್ ಎನ್ ನಿರ್ಮಾಣ ಸಹ ಮಾಡಿದ್ದಾರೆ. 'ಆಕ್ರಮಣ' ಮೈಸೂರಿನಲ್ಲಿ ಪ್ರಾರಂಭವಾಗಿ ಮೈಸೂರಿನಲ್ಲಿ ಸಂಪೂರ್ಣಗೊಳಿಸಿದ ಚಿತ್ರ.
ಕನ್ನಡದಲ್ಲಿ ತಯಾರಾದ 'ಕಠಾರಿ ವೀರ ಸುರ ಸುಂದರಂಗಿ' ಚಿತ್ರಕ್ಕೆ ಸಹಾಯಕರಾಗಿ ಕೆಲಸ ಮಾಡುತ್ತಿರುವಾಗಲೇ ಇವರಿಗೆ ರತೀಶ್ ಕುಮಾರ್ ಅವರ ಪರಿಚಯವಾಯಿತು. 3ಡಿ ಹಾಗೂ 2ಡಿ ತಂತ್ರಜ್ಞಾನದಲ್ಲಿ ಸಿನೆಮಾ ಮಾಡುವ ಆಸೆ ಮೊಳಕೆ ಒಡದಿದ್ದು ಆಗಲೇ. ಆಕ್ರಮಣ ಚಿತ್ರವನ್ನು ಮೈಸೂರು, ಮಡಿಕೇರಿ, ಕಾಸರಗೊಡಿನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಚೆನ್ನೈನಲ್ಲಿ ಬಾಲ ಅವರು '3ಡಿ'ಗಾಗಿ, ಬೆಂಗಳೂರಿನಲ್ಲಿ ಜೀವನ್ ಅವರು '2ಡಿ' ತಂತ್ರಜ್ಞಾನದ ಸಂಕಲನ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಸುನಿಲ್ ಆರ್, ಸತೀಶ್ ಆರ್ಯನ್ ಅವರ ಸಂಗೀತ, ಕೆ.ಜಿ ರತೀಶ್ ಅವರು ಛಾಯಾಗ್ರಾಹಕರು, ಆಸ್ಕರ್ ಅಭಿಶೇಖ್, ಲಲಿತ ರಾಜ್ ವಿನಾಯಕ್, ಆದರ್ಶ್ ಎಂ.ಎನ್ ಸಂಭಾಷಣೆ ಬರೆದಿದ್ದಾರೆ, ಶಂಕರ್, ಮಂಜುನಾಥ ರಾವು, ಆದರ್ಶ್, ಸತೀಶ್ ಆರ್ಯನ್ ಆವರ ಗೀತ ಸಾಹಿತ್ಯವಿದೆ.
ದೀಪಕ್ ಅವರ ನೃತ್ಯ ನಿರ್ದೇಶನ, ಕೆ.ಡಿ ವೆಂಕಟೇಶ್ ಅಂಡ್ ರಾಜೇಶ್ ಕಣ್ಣನ್ ಅವರ ಸಾಹಸ, ಸಹಾಯಕ ನಿರ್ದೇಶಕರಾಗಿ ಆದರ್ಶ, ಲಲಿತ ರಾಜ್ ವಿನಾಯಕ್, ಸಂಜೋತ ಅವರ ಸಹಾಯಕ ನಿರ್ದೇಶನ ಇದೆ.
ತಾರಾಗಣದಲ್ಲಿ ಖಾಕಿ ತೊಟ್ಟ ಅಧಿಕಾರಿಯಾಗಿ ರಘು ಮುಖರ್ಜಿ, ಡೈಸಿ ಶಾ, ಶಿಲ್ಪಿ ಶರ್ಮ, ಮಕರಂದ್ ದೇಶ್ ಪಾಂಡೆ, ಅವಿನಾಶ್, ಸಿದ್ಲಿಂಗು ಶ್ರೀಧರ್, ಸುದರ್ಶನ್, ರಮೇಶ್ ಪಂಡಿತ್, ಡ್ಯಾನಿ ಕುಟ್ಟಪ್ಪ, ಮಾರ್ಕೊ, ಪ್ರಕಾಶ್ ಶೆಣೈ, ಕಿಶೋರಿ ಬಲ್ಲಾಳ್ ಹಾಗೂ ಇತರರು ಇದ್ದಾರೆ. (ಒನ್ಇಂಡಿಯಾ ಕನ್ನಡ)