Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದಲ್ಲಿ ಗಾಯಗೊಂಡ ನಟ ಅನಂತನಾಗ್
ಹಿರಿಯ ನಟ ಅನಂತನಾಗ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಮೈಸೂರಿನಿಂದ ಚಿತ್ರೀಕರಣ ಮುಗಿಸಿಕೊಂಡು ಬೆಂಗಳೂರಿಗೆ ಮರಳುವಾಗ ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ. ಅನಂತನಾಗ್ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ಪತ್ನಿ ಗಾಯತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ನಟ ದರ್ಶನ್ ಅಭಿನಯದ 'ಐರಾವತ' ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದ ಅನಂತನಾಗ್ ಅಲ್ಲಿಂದ ಡಿಸೆಂಬರ್ 25ರ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಮರಳುತ್ತಿದ್ದರು. 11 ಗಂಟೆ ಸುಮಾರಿಗೆ ರಾಮನಗರದ ಹೆಜ್ಜಾಲ ಬಳಿ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಅನಂತನಾಗ್ ಅವರನ್ನು ನೋಡಿ ಮತ್ತೊಂದು ಕಾರಿನಲ್ಲಿ ಆಸ್ಪತ್ರೆಗೆ ಸೇರಿಸಲು ನೆರವು ನೀಡಿದರು. ಅನಂತನಾಗ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು ಪತ್ನಿ ಗಾಯತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅನಂತನಾಗ್ ಕಾರು ಚಾಲಕನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅನಂತನಾಗ್ ಪ್ರಯಾಣಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಸರಣಿ ಅಪಘಾತ ನಡೆದು, ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಬಿಡದಿ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರವನ್ನು ಸುಗಮಗೊಳಿಸಿದರು.