Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉತ್ತಮ ವಿಲನ್' ಪರ ನಿಂತ ಚಾಲೆಂಜಿಂಗ್ ಸ್ಟಾರ್
ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರಿನಲ್ಲಿ ಈ ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಇಲ್ಲಿ 2013ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕಾರಗಳು ನಡೆದಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ.
ತಮ್ಮ ಈ ಗೌರವವನ್ನ ಚಿತ್ರರಂಗದ ಖಳನಾಯಕರಿಗೆ ಅರ್ಪಿಸಿದ ದರ್ಶನ್ ಇದೇ ವೇದಿಕೆಯಲ್ಲಿ ಖಳನಾಯಕರಿಗೆ ರಾಜ್ಯ ಸರ್ಕಾರ ಅತ್ಯುತ್ತಮ ಖಳನಟ ರಾಜ್ಯಪ್ರಶಸ್ತಿ ನೀಡಿ ಗೌರವಿಸಬೇಕು ಅನ್ನೋ ಬೇಡಿಯನ್ನಿಟ್ಟಿದ್ದಾರೆ. [ಕನ್ನಡ ಚಲನಚಿತ್ರ ಪ್ರಶಸ್ತಿ, ಮೈಸೂರಿನ ಚಿತ್ರಗಳು]
ಇದಕ್ಕೆ ಅದೇ ವೇದಿಕೆಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದರ್ಶನ್ ಅವರ ಮನವಿಯನ್ನ ಪರಿಗಣಿಸುತ್ತೇವೆ ಮುಂದಿನ ವರ್ಷದಿಂದ ಅತ್ಯುತ್ತಮ ವಿಲನ್ ವಿಭಾಗಕ್ಕೆ ಬಹುಮಾನ ನೀಡುತ್ತೇವೆ ಅಂತ ಘೋಷಣೆ ಮಾಡಿದ್ದಾರೆ.
ಇದರಿಂದ ಚಿತ್ರರಂಗಕ್ಕೊಂದು ಹೊಸ ಆಶಾವಾದ ಸೃಷ್ಟಿಯಾಗಿದೆ. ಇಲ್ಲಿಯವರೆಗೂ ವಿಲನ್ ಪಾತ್ರ ಮಾಡಿದವರನ್ನೂ ವಿಲನ್ ತರಹ ನೋಡ್ತಿದ್ದ ಮನಸ್ಥಿತಿಗಳು ಬದ್ಲಾಗಿವೆ. ಚಿತ್ರರಂಗದಲ್ಲಿ ವಿಲನ್ ಪಾತ್ರ ಮಾಡೋರಿಗೆ ಉತ್ತೇಜನ ಸಿಕ್ಕಂತಾಗಿದೆ. ದರ್ಶನ್ ಕನ್ನಡದ ಖ್ಯಾತ ವಿಲನ್ ತೂಗುದೀಪ್ ಶ್ರೀನಿವಾಸ್ ರ ಪುತ್ರನಾಗಿ ಈ ಮೂಲಕ ತಂದೆಗೆ ಗೌರವ ಸಲ್ಲಿಸೋ ಕೆಲಸ ಮಾಡಿದ್ದಾರೆ.