Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಕ್ಟರ್' ಆದ ನವೀನ್ ಕೃಷ್ಣ ಕಥೆ ಏನು?
ಎಲ್ಲೆಡೆ ಭಾರಿ ಪ್ರಶಂಸೆ ಗಿಟ್ಟಿಸಿಕೊಂಡ 'ಹಗ್ಗದ ಕೊನೆ' ಚಿತ್ರದ ನಂತರ ನಿರ್ದೇಶಕ ದಯಾಳ್ ಪದ್ಮನಾಭನ್ ಹಾಗೂ ನಟ ನವೀನ್ ಕೃಷ್ಣ ಅವರು ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಇದೀಗ ಚಿತ್ರರಂಗದ ವಿಷಯವನ್ನೇ ಆರಿಸಿಕೊಂಡಿರುವ ನಿರ್ದೇಶಕ ದಯಾಳ್ ಅವರು ಚಿತ್ರರಂಗದ ಮತ್ತೊಂದು ಮಗ್ಗಲನ್ನು 'ಆಕ್ಟರ್' ಎಂಬ ಚಿತ್ರದ ಮೂಲಕ ತೋರಿಸಲು ಹೊರಟಿದ್ದಾರೆ.
ಇದೇ ಮೊದಲ ಬಾರಿಗೆ ಚಿತ್ರಲೋಕ ಡಾಟ್ ಕಾಮ್ ನ ವೀರೇಶ್ ಅವರು ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದು, 'ಆಕ್ಟರ್' ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಚಿತ್ರಲೋಕ ಮೂವೀಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿ ಬರಲಿದೆ.
ಶೇ. 80 ರಷ್ಟು ಚಿತ್ರವನ್ನು 'ಹಗ್ಗದ ಕೊನೆ' ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ನವೀನ್ ಕೃಷ್ಣ ಅವರ ಪಾತ್ರ ಆವರಿಸಿಕೊಂಡಿದ್ದು, ಚಿತ್ರದ ಕೊನೆಯ ಹಂತದಲ್ಲಿ ಸಿಹಿಕಹಿ ಗೀತಾ ನಟಿಸಿರುವ ಪಾತ್ರ ಬರಲಿದೆ. ವಿಭಿನ್ನ ಕಥಾ ಹಂದರವನ್ನು ಹೊಂದಿರುವ ಚಿತ್ರದ ಚಿತ್ರೀಕರಣ ನವೆಂಬರ್ 16 ರಿಂದ ಆರಂಭವಾಗಲಿದೆ.
ಅತ್ಯಂತ ಉಚ್ಛ ಸ್ಥಿತಿಯಲ್ಲಿರುವ ನಟನೋರ್ವ ಏಕಾಏಕಿ ಕುಸಿಯುವ ಕಥಾವಸ್ತುವನ್ನು ಚಿತ್ರಕ್ಕೆ ಬಳಸಿಕೊಳ್ಳಲಾಗಿದೆ. ಒಂದೇ ನಾಣ್ಯಕ್ಕೆ ಎರಡು ಮುಖಗಳಿರುವಂತೆ, ಒಬ್ಬ ನಟನಿಗೆ ಎರಡು ಮುಖಗಳಿರುತ್ತವೆ. ಅದನ್ನು ಈ ಚಿತ್ರದಲ್ಲಿ ಹೇಳುವುದಾಗಿ ನಿರ್ದೇಶಕ ದಯಾಳ್ ಪದ್ಮನಾಭನ್ ಹೇಳಿದ್ದಾರೆ.
ಬೆಳಿಗ್ಗೆ 6 ಘಂಟೆಯಿಂದ ಮಧ್ಯಾಹ್ನ 12ರ ವರೆಗೆ ನಡೆಯಲಿರುವ ಘಟನೆಯು ಸುಮಾರು ಎರಡೂವರೆ ಘಂಟೆ ಸಿನಿಮಾ ರೂಪದಲ್ಲಿ ಪ್ರೇಕ್ಷಕರೆದುರು ಬರಲಿದೆ. ಈಗಾಗಲೇ ಚಿತ್ರದ ಬಿಡುಗಡೆಯ ದಿನಾಂಕ ನಿಗದಿಯಾಗಿದ್ದು, ಫೆಬ್ರವರಿ 19 ರಂದು ಬಿಡುಗಡೆಯಾಗಲಿದೆ. ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ ಅವರು ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಸುರೇಶ್ ಭೈರಸಂದ್ರ ಅವರು ಕ್ಯಾಮರ ಕೈಚಳಕ ತೋರಲಿದ್ದಾರೆ.