Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಘಣ್ಣನಿಗೆ ಆಪರೇಷನ್ ಸಕ್ಸಸ್: ಶಿವಣ್ಣ ಹೇಳಿದ್ದೇನು?
ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಮಾಡಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಈಗವರು ಆರೋಗ್ಯದಿಂದಿದ್ದು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ನರರೋಗ ತಜ್ಞೆ ಡಾ.ಮೇಧಾ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಬಗ್ಗೆ ವಿವರ ನೀಡಿದ ಡಾ.ಮೇಧಾ ಅವರು, "ಮೆದುಳಿನ ನರವ್ಯೂಹದ ಒಂದು ಭಾಗದಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಅದನ್ನು ತೆಗೆದಿದ್ದೇವೆ. ಈಗವರು ಆರಾಮವಾಗಿದ್ದಾರೆ. ಈ ಕ್ಷಣಕ್ಕೆ ನಾವು ಇಷ್ಟು ಮಾಹಿತಿಯನ್ನು ಮಾತ್ರ ಕೊಡಲು ಸಾಧ್ಯ. ಅವರಿಗೆ ಬ್ರೈನ್ ಹ್ಯಾಮರೇಜ್ ಚಿಕಿತ್ಸೆ ನೀಡಲಾಗಿದೆ. ದೇವರ ಕೃಪೆಯಿಂದ ಈಗವರು ಆರಾಮವಾಗಿದ್ದಾರೆ ಆತಂಕಪಡುವ ಅಗತ್ಯವಿಲ್ಲ." ಎಂದು ವಿವರ ನೀಡಿದರು.
ಬುಧವಾರ (ಅ.16) ಬೆಳಗ್ಗೆ ರಾಘವೇಂದ್ರ ರಾಜ್ ಕುಮಾರ್ ಅವರು ಕುಸಿದು ಬಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಘಣ್ಣನಿಗೆ ಏನಾಗಿದೆ ಎಂಬ ಬಗ್ಗೆ ಸರಿಯಾದ ಮಾಹಿತಿ ಇರಲಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳಲ್ಲೂ ಆತಂಕ ಮನೆ ಮಾಡಿತ್ತು. ಈಗ ಸ್ವತಃ ಶಿವರಾಜ್ ಕುಮಾರ್ ವಿವರ ನೀಡುವುದರ ಮೂಲಕ ಎಲ್ಲವೂ ನಿರಾಳವಾಗಿದೆ. (ಒನ್ಇಂಡಿಯಾ ಕನ್ನಡ)