Don't Miss!
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- News ಲೋಕಸಭಾ ಚುನಾವಣೆ: ಮತದಾನದ ದಿನ Rapidoದಿಂದ ಉಚಿತ ಸೇವೆ, ಯಾರಿಗೆ ಲಭ್ಯ..?
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಗೇಪಲ್ಲಿಯಿಂದ ಚುನಾವಣೆಗೆ ಸಾಯಿಕುಮಾರ್
ಅವರು ಈ ಬಾರಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲದಿದ್ದರೂ, ಬಹುಶಃ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿಚ್ಚಳವಾಗಿವೆ. ಜನಾರ್ದನ ರೆಡ್ಡಿ ಅವರೊಂದಿಗೆ ಅವರು ಈ ಬಗ್ಗೆಯೇ ಚರ್ಚಿಸಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಅವರು ಚುನಾವಣೆಯಲ್ಲಿ ಅಲ್ಪಮತದಿಂದ ತಮ್ಮ ಸಮೀಪದ ಸ್ಪರ್ಧಿ ಎನ್ ಸಂಪಂಗಿ (ಕಾಂಗ್ರೆಸ್) ವಿರುದ್ಧ ಸೋತಿದ್ದರು.
ಆದರೆ ಈ ಬಾರಿ ಅವರು ಬಾಗೇಪಲ್ಲಿ ಕ್ಷೇತ್ರದಿಂದಲ್ಲೇ ಸ್ಪರ್ಧಿಸುವುದಾಗಿ ತಿಳಿಸಿದ್ದು, ಯಾವ ಪಕ್ಷದಿಂದ ಸ್ಪರ್ಧಿಸಲಿದ್ದೇನೆ ಎಂಬುದನ್ನು ಶೀಘ್ರದಲ್ಲೇ ವಿವರ ನೀಡುವುದಾಗಿ ತಿಳಿಸಿದ್ದಾರೆ. ರೆಡ್ಡಿ ಅವರನ್ನು ಭೇಟಿಯಾದ ಬಗ್ಗೆ ಅವರು ಮಾತನಾಡಲು ನಿರಾಕರಿಸಿದ್ದಾರೆ.
ಉಪೇಂದ್ರ ಅವರ 'ಕಲ್ಪನ' ಚಿತ್ರದ ಬಳಿಕ ಅವರು ಅಂಗುಲಿಮಾಲ ಎಂಬ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಭಗವಂತ ಎಂಬ ಮತ್ತೊಂದು ಚಿತ್ರಕ್ಕೂ ಸಾಯಿಕುಮಾರ್ ಸಹಿಹಾಕಿದ್ದಾರೆ. (ಏಜೆನ್ಸೀಸ್)