Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ರೀಮೇಕ್ ಚಿತ್ರಕ್ಕೆ ಶರಣ್ ನಾಯಕ.!
ಸ್ಯಾಂಡಲ್ ವುಡ್ ಸ್ಟಾರ್ ನಟ ಶರಣ್ ಸಿಕ್ಕಾಪಟ್ಟೆ ಬ್ಯುಸಿ ಇದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳು ಮೂಲಕ ಕನ್ನಡ ಪ್ರೇಕ್ಷಕರನ್ನ ರಂಜಿಸುತ್ತಿದ್ದಾರೆ. ಸದ್ಯ, ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ 'ರಾಜ್-ವಿಷ್ಣು' ಚಿತ್ರ ಬಿಡುಗಡೆಗೆ ಸಿದ್ದವಾಗುತ್ತಿದೆ. ಈ ಮಧ್ಯೆ ಮತ್ತೊಂದು ರೀಮೇಕ್ ಚಿತ್ರಕ್ಕೆ ಶರಣ್ ನಾಯಕರಾಗುತ್ತಿದ್ದಾರೆ.
ಹೌದು, 'ವಜ್ರಕಾಯ', 'ಚಿಂಗಾರಿ', 'ಭಜರಂಗಿ', 'ಬಿರುಗಾಳಿ' ಅಂತಹ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಯೋಗಾನಂದ್ ಮುದ್ದಾನ್ ಈಗ ನಿರ್ದೇಶಕರಾಗುತ್ತಿದ್ದು, ಇವರ ಮುಂದಿನ ಚಿತ್ರದಲ್ಲಿ ಶರಣ್ ನಾಯಕರಾಗುತ್ತಿದ್ದಾರಂತೆ.
ಅಂದ್ಹಾಗೆ, ಈ ಚಿತ್ರ ತೆಲುಗಿನ ರೀಮೇಕ್ ಆಗಿದ್ದು, ಯಾವ ಚಿತ್ರ ಎಂಬ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ತೆಲುಗು ನಿರ್ಮಾಪಕರೇ ಬಂಡವಾಳ ಹಾಕುತ್ತಿದ್ದು, ಕರ್ನಾಟಕ ಹಾಗೂ ಅಮೆರಿಕಾದಲ್ಲಿ ಚಿತ್ರೀಕರಣ ನಡೆಯಲಿದೆಯಂತೆ.
ಇನ್ನು ವಿ.ಹರಿಕೃಷ್ಣ ಸಂಗೀತ ನೀಡಲಿದ್ದು, ಕೆ.ಎಂ ಪ್ರಕಾಶ್ ಸಂಕಲನಕಾರರಾಗಿ ಕೆಲಸ ಮಾಡಲಿದ್ದಾರೆ. ಸದ್ಯ, ಪ್ರಿ-ಪ್ರೊಡಕ್ಷನ್ ಕೆಲಸಗಳನ್ನ ಮುಗಿಸಿರುವ ಚಿತ್ರತಂಡ, ಜುಲೈ ಅಂತ್ಯಕ್ಕೆ ಸಿನಿಮಾ ಶುರು ಮಾಡುವ ಯೋಚನೆಯಲ್ಲಿದೆಯಂತೆ.