Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೀತಿ ಸಂಹಿತೆ ಉಲ್ಲಂಘನೆ': ಕೋರ್ಟ್ ಗೆ ಹಾಜರಾದ ಶಿವಣ್ಣ ದಂಪತಿ
2014ನೇ ವರ್ಷದ ಲೋಕಸಭಾ ಚುನಾವಣೆ ವೇಳೆ 'ನೀತಿ ಸಂಹಿತೆ ಉಲ್ಲಂಘಿಸಿದ' ಹಿನ್ನಲೆಯಲ್ಲಿ ಆರೋಪ ಎದುರಿಸುತ್ತಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಚಾರಣೆಗಾಗಿ ಇಂದು (ಫೆಬ್ರವರಿ 24) ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ತಿಂಗಳು ಮಾರ್ಚ್ 26ಕ್ಕೆ ಮುಂದೂಡಿದ್ದಾರೆ.[ಶಿವಣ್ಣ30: ಅಭಿಮಾನಿಗಳು ಶಿವಣ್ಣನಿಗೆ ಪ್ರೀತಿಯಿಂದ ಕೊಟ್ಟ ಗಿಫ್ಟೇನು?]
ಜೆ.ಡಿ.ಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಅಂದಹಾಗೆ ಮತದಾನಕ್ಕೆ 48 ಘಂಟೆ ಮುನ್ನ ಬಹಿರಂಗ ಮತಯಾಚನೆಗೆ ಅವಕಾಶ ಇಲ್ಲದ ಸಂದರ್ಭದಲ್ಲಿ ಅಭ್ಯರ್ಥಿ ಪರ ಮತಯಾಚಿಸಿದ ಆರೋಪ ನಟ ಶಿವರಾಜ್ ಕುಮಾರ್ ಅವರ ಮೇಲಿದೆ.[ಶಿವಣ್ಣ30 ವಿಶೇಷ: ಶಿವಣ್ಣ ಅವರ 20 ಉತ್ತಮ ಚಿತ್ರಗಳ List]
ಶಿವಮೊಗ್ಗದ ನವುಲೆ ಬಳಿ ನಟ ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಮನೆ ಮನೆ ಪ್ರಚಾರ ಮಾಡಿದ್ದರು. ಈ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.
ಇಂದು ಶಿವಣ್ಣ ಮತ್ತು ಗೀತಾ ದಂಪತಿಗಳು ಕೋರ್ಟ್ ಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.