Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಛೇ 'ರಾಜ್-ವಿಷ್ಣು'ಗೆ ರೆಬೆಲ್ ಸ್ಟಾರ್ ಅಂಬರೀಶ್ ಸಾಥ್ ಕೊಡಲ್ವಂತೆ
ಶರಣ್-ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ತಮಿಳು 'ರಜನಿ ಮುರುಗನ್' ರೀಮೇಕ್ 'ರಾಜ್ ವಿಷ್ಣು' ಶೂಟಿಂಗ್ ಭರದಿಂದ ಸಾಗುತ್ತಿದ್ದು, ಸದ್ಯಕ್ಕೆ ಟಾಕಿ ಪೋರ್ಷನ್ ಕೆಲಸಗಳಲ್ಲಿ ಚಿತ್ರತಂಡ ಬಿಜಿಯಾಗಿದೆ.
ಈ ಚಿತ್ರದ ಲೇಟೆಸ್ಟ್ ಮಾಹಿತಿ ಏನಂದ್ರೆ, ಈ ಮೊದಲು ಚಿತ್ರದಲ್ಲಿ ಶರಣ್ ಅವರ ಅಜ್ಜನ ಪಾತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರು ಕಾಣಿಸಿಕೊಳ್ಳುತ್ತಾರೆ ಎಂದು ಸುದ್ದಿ ಇತ್ತು. ಆದರೆ ಇದೀಗ ಕೆಲವು ಅನಿವಾರ್ಯ ಕಾರಣಗಳಿಂದ ಅಂಬರೀಶ್ ಅವರ ಜಾಗಕ್ಕೆ ಹಿರಿಯ ನಟ ಶ್ರೀನಿವಾಸಮೂರ್ತಿ ಅವರನ್ನು ಹಾಕಿಕೊಳ್ಳಲಾಗಿದೆ.['ರಾಜ್-ವಿಷ್ಣು'ಗೆ ಮುರಳಿ ಕಡೆಯಿಂದ ಕೂಡ ಒಂದು ಸಲಾಮ್]
ಅಂದಹಾಗೆ ವಿಶೇಷವಾಗಿ ಈ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಅತಿಥಿ ಪಾತ್ರ ವಹಿಸಿದ್ದಾರೆ. ಈಗಾಗಲೇ ನಟ ಶ್ರೀಮುರಳಿ, ಚಿಕ್ಕಣ್ಣ ಮತ್ತು ಶರಣ್ ಅವರ ಭಾಗದ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಮೈಸೂರಿನಲ್ಲಿ ನಡೆಸಲಾಗಿತ್ತು.[ಶರಣ್ 'ರಾಜ್ ವಿಷ್ಣು'ನಿಂದ ಮಲ್ಲು ಕುಟ್ಟಿ ರೆಮ್ಯಾ ನಂಬೀಸನ್ ಔಟ್]
ಇನ್ನು ಇದೇ ಮೊದಲ ಬಾರಿಗೆ ಮರಾಠಿ ನಟಿ ವೈಭವಿ ಶಾಂಡಿಲ್ಯ ಅವರು ಶರಣ್ ಅವರ ಜೊತೆ ಡ್ಯುಯೆಟ್ ಹಾಡಿದ್ದು, ರವಿಶಂಕರ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರಕ್ಕೆ ನಿರ್ಮಾಪಕ ರಾಮು ಅವರು ಬಂಡವಾಳ ಹೂಡಿದ್ದು, ಕೆ.ಮಾದೇಶ್ ಅವರು ನಿರ್ದೇಶನ ಮಾಡಿದ್ದಾರೆ.