Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಲೇಡಿ ಟೈಗರ್' ಮಾಲಾಶ್ರೀ ಅವರ ಮುಂದಿನ ಪ್ರಾಜೆಕ್ಟ್ ಯಾವುದು?
'ಲೇಡಿ ಟೈಗರ್', 'ರಣಚಂಡಿ', 'ಚಂಡಿ-ಚಾಮುಂಡಿ', 'ಕನ್ನಡದ ಕಿರಣ್ ಬೇಡಿ' ಅಂತೆಲ್ಲಾ ಹೆಸರುಗಳಿಂದ ಕರೆಯಲ್ಪಡುವ ನಟಿ ಮಾಲಾಶ್ರೀ ಅವರು 'ಗಂಗಾ' ಚಿತ್ರದ ನಂತರ ಗಾಂಧಿನಗರದಿಂದ ನಾಪತ್ತೆಯಾಗಿದ್ದರು.
ತದನಂತರ ಯಾವುದೇ ಪ್ರಾಜೆಕ್ಟ್ ಗಳಲ್ಲಿ ಕೈ ಜೋಡಿಸದ ಮಾಲಾಶ್ರೀ ಅವರು ಇದೀಗ ಬಹು ತಾರಾಗಣ ಇರುವ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೌದು ನಿರ್ದೇಶಕ ಗುರು ದೇಶಪಾಂಡೆ ಅವರ 'ಜೋನ್ ಜಾನಿ ಜನಾರ್ಧನ' ಎಂಬ ಸಿನಿಮಾದಲ್ಲಿ ಮಾಲಾಶ್ರಿ ಮಿಂಚಲಿದ್ದಾರೆ.[ಕನ್ನಡ ಚಿತ್ರರಂಗದ ಲೇಡಿ ಟೈಗರ್ ಮಾಲಾಶ್ರೀ ಈಗೇನ್ಮಾಡ್ತಿದ್ದಾರೆ]
ಎಮ್.ಆರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ 'ಜೋನ್ ಜಾನಿ ಜನಾರ್ಧನ್' ಚಿತ್ರ ನಿರ್ದೇಶಕ ನಾದಿರ್ ಷಾ ಆಕ್ಷನ್-ಕಟ್ ಹೇಳಿದ್ದ ಮಲಯಾಳಂ ಚಿತ್ರ 'ಅಮರ್ ಅಕ್ಬರ್ ಆಂಟನಿ' ಚಿತ್ರದ ರೀಮೆಕ್ ಆಗಿದೆ.
'ಜೋನ್ ಜಾನಿ ಜನಾರ್ಧನ' ಚಿತ್ರದಲ್ಲಿ ನಟ ಅಜೇಯ್ ರಾವ್, ಲೂಸ್ ಮಾದ ಯೋಗೇಶ್ ಮತ್ತು ನಟ ಕೃಷ್ಣ ಅಲಿಯಾಸ್ ಸುನೀಲ್ ನಾಗಪ್ಪ ಅವರು ಮಿಂಚುತ್ತಿದ್ದು, ಇವರ ಜೊತೆ ಮಾಲಾಶ್ರೀ ಅವರು ವಿಭಿನ್ನ ಪಾತ್ರದಲ್ಲಿ ಮಿಂಚಲಿದ್ದಾರೆ.[ಆಟೋ ಡ್ರೈವರ್ ಆಗಿ ಮಿಂಚಲಿರುವ ಲೇಡಿ ಟೈಗರ್]
ಈಗಾಗಲೇ ಮಲಯಾಳಂ ಚಿತ್ರದ ರೀಮೆಕ್ ಹಕ್ಕು ಖರೀದಿ ಮಾಡಿರುವ ನಿರ್ದೇಶಕ ಗುರು ದೇಶಪಾಂಡೆ ಅವರು ಮೇ ತಿಂಗಳಿನಲ್ಲಿ ಶೂಟಿಂಗ್ ಆರಂಭಿಸಲು ನಿರ್ಧರಿಸಿದ್ದಾರೆ. ಚಿತ್ರದ ಮೂವರು ನಾಯಕರಿಗೆ ನಾಯಕಿಯರ ಹುಡುಕಾಟದಲ್ಲೂ ನಿರ್ದೇಶಕರು ಬ್ಯುಸಿಯಾಗಿದ್ದಾರೆ.
ಸದಾ ವಿಭಿನ್ನ ಪಾತ್ರಗಳ ಮೂಲಕ ತೆರೆಯ ಮೇಲೆ ಮಿಂಚುವ ಮಾಲಾಶ್ರೀ ಈ ಚಿತ್ರದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಅನ್ನೋದು ಕೆಲವೇ ದಿನಗಳಲ್ಲಿ ತಿಳಿಯಲಿದೆ.