Don't Miss!
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಳವಿಕಾ ಅವಿನಾಶ್ ಈಗ ರಾಜ್ಯ ಬಿಜೆಪಿ ವಕ್ತಾರೆ
ಕಳೆದ ವರ್ಷವಷ್ಟೆ ಮಾಳವಿಕಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದವರು. ಅದಕ್ಕೂ ಮುನ್ನ ಜೆಡಿಎಸ್ ಪಾಳಯದಲ್ಲಿದ್ದವರು. ಎರಡು ವರ್ಷಗಳ ಕಾಲ ಜೆಡಿಎಸ್ ನ ತೆನೆಹೊತ್ತ ಮಹಿಳೆ ಮಾಳವಿಕಾ ಅವರಿಗೆ ಹೊಸ ಹೊರೆ ನೀಡಲಿಲ್ಲ. ಕಡೆಗೂ ಅವರಿಗೆ ಜೆಡಿಎಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿರಲಿಲ್ಲ.
ಆದರೆ ಬಿಜೆಪಿ ಪಕ್ಷ ಮಾಳವಿಕಾ ಅವರಿಗೆ ಹೊಸ ಜವಾಬ್ದಾರಿಯನ್ನು ನೀಡಿದೆ. ಹದಿನಾರನೇ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಳವಿಕಾ ಅವರಿಗೆ ಈ ಹೊಸ ಪದವಿಯನ್ನು ನೀಡಿರುವುದು ವಿಶೇಷ.
ಇನ್ನು ಮಾಳವಿಕ ಅವರು ಕರ್ನಾಟಕದಲ್ಲಿ ಟಿವಿ ನೋಡುವ ಹೆಣ್ಣು ಮಕ್ಕಳಿಗೆ ಚಿರಪರಿಚಿತ ಮುಖ. ಕಿರುತೆಯಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿದವರು. ಮಾಯಾಮೃಗ ಸೀರಿಯಲ್ಲು ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿದೆ.
ಜೀ ಕನ್ನಡ ವಾಹಿನಿಯ ಬದುಕು ಜಟಕ ಬಂಡಿ ಕಾರ್ಯಕ್ರಮದಲ್ಲಿ ಕ್ಯಾಮೆರಾ ಎದುರಲ್ಲೇ ಪಂಚಾಯಿತಿ ಮಾಡಿ ಸ್ಥಳದಲ್ಲೇ ಪರಿಹಾರ ಹುಡುಕಿ ಸಾಕಷ್ಟು ಹೆಣ್ಣು ಮಕ್ಕಳ ಕಣ್ಣೀರು ಒರೆಸಿದ್ದಾರೆ. ಈಗ ಬಿಜೆಪಿ ವಕ್ತಾರೆಯಾಗಿ ಕಮಲಕ್ಕೆ ಇನ್ನಷ್ಟು ಹೊಳಪು ನೀಡಲಿದ್ದಾರೆ.(ಏಜೆನ್ಸೀಸ್)