Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತಿವೇಗದ ಚಾಲನೆ ಪೂಜಾಗಾಂಧಿ ಬಂಧನ, ಬಿಡುಗಡೆ
ಇತ್ತೀಚೆಗೆ ನಟಿ ಪೂಜಾಗಾಂಧಿ ಅವರು ಅಪಘಾತ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಸುದ್ದಿಯನ್ನು ಓದಿರುತ್ತೀರಿ. ಈ ಸಂಬಂಧ ಜಯನಗರ ಸಂಚಾರ ಪೊಲೀಸರು ಅವರನ್ನು ಬಂಧಿಸಿ ಬಳಿಕ ಜಾಮೀನು ಮೇರೆಗೆ ಬಿಡುಗಡೆಗೊಳಿಸಿದ್ದಾರೆ.
ಅವರ ವಿರುದ್ಧ ಹಲವಾರು ಕೇಸ್ ಗಳನ್ನು ದಾಖಲಿಸಿಕೊಂಡು ಬಂಧಿಸಲಾಗಿತ್ತು. ಅವುಗಳಲ್ಲಿ ನಿರ್ಲಕ್ಷ್ಯತನ ಮತ್ತು ಅತಿವೇಗದ ಚಾಲನೆ (ಐಪಿಸಿ ಸೆಕ್ಷನ್ 279), ಅಪಘಾತದಲ್ಲಿ ಗಾಯಗೊಳಿಸುವುದು (ಐಪಿಸಿ ಸೆಕ್ಷನ್ 337), ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿರುವುದು (ಐಪಿಸಿ 334 ಬಿ) ಹಾಗೂ ಮೋಟರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. [ಜಯನಗರದಲ್ಲಿ ಪೂಜಾಗಾಂಧಿ ಕಾರಿಗೆ ಸ್ಕೂಟರ್ ಡಿಕ್ಕಿ]
ಘಟನೆಯಲ್ಲಿ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವ ಉಂಟಾಗಿದ್ದರಿಂದ ವರ್ಷಾ ಒಂದೆರಡು ನಿಮಿಷದಲ್ಲೇ ನಿತ್ರಾಣರಾದರು. ಕೂಡಲೇ ಸ್ಥಳೀಯರ ನೆರವು ಪಡೆದ ಪೂಜಾಗಾಂಧಿ, ಕಾರಿನಲ್ಲಿ ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಘಟನೆ ವೇಳೆ ಪೂಜಾಗಾಂಧಿ ಅವರೇ ಕಾರು ಚಲಾಯಿಸುತ್ತಿದ್ದರು ಪ್ರತ್ಯಕ್ಷದರ್ಶಿಗಳು ಹೇಳಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ವರ್ಷಾ ಅವರ ಅಣ್ಣ ದೀಪಕ್ ಅವರು ಪೂಜಾಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾಗಾಂಧಿ ಅವರನ್ನು ಬಂಧಿಸಿ ಬಳಿಕ ಠಾಣಾ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.