Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಜೊತೆ ಹೆಜ್ಜೆ ಹಾಕಲಿರುವ ನಟಿ ಶ್ರುತಿ
ಗುರುವಾರ (ಫೆ.7)ಯಡಿಯೂರಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಶ್ರುತಿ ಅವರು ಪಾಲ್ಗೊಳ್ಳುವ ಮೂಲಕ ಕೆಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಕಾವೇರಿಗಾಗಿ ಯಡಿಯೂರಪ್ಪ ಪಕ್ಷಾತೀತ ಹೋರಾಟ ಹಮ್ಮಿಕೊಂಡಿದ್ದು, ಮೈಸೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆಗೆ ಮುಂದಾಗಿರುವುದು ಗೊತ್ತೇ ಇದೆ.
ಶ್ರುತಿ ಅವರು ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದರು. ಇದೆಲ್ಲದರ ಫಲವಾಗಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯನ್ನಾಗಿ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ನಿರ್ದೇಶಕ ಎಸ್ ಮಹೇಂದರ್ ಅವರೊಂದಿಗೆ ವೈವಾಹಿಕ ಬಿಕ್ಕಟ್ಟುಗಳು ಬಹಿರಂಗವಾದವು. ವಿಚ್ಛೇದನ ನೀಡುವ ಮೂಲಕ ಅವರಿಂದ ಬೇರ್ಪಟ್ಟರು. ಇಷ್ಟೆಲ್ಲಾ ಬೆಳವಣಿಗೆಗಳ ನಂತರ ಶ್ರುತಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದಿಂದ ಕೈಬಿಡಲಾಯಿತು.
ಬಳಿಕ ಅವರು ಚಿತ್ರಗಳಲ್ಲೂ ಅಷ್ಟಾಗಿ ಕಾಣಿಸಿಕೊಳ್ಳಲಿಲ್ಲ. ರಾಜಕೀಯದಿಂದಲೂ ದೂರ ಉಳಿದರು. ಈಗ ಕೆಜೆಪಿ ಪಕ್ಷದ ಕಡೆಗೆ ವಾಲುವ ಮೂಲಕ ಎರಡನೇ ಇನ್ನಿಂಗ್ಸ್ ಗೆ ರೆಡಿಯಾಗುತ್ತಿದ್ದಾರೆ.
ಅತ್ತ ಅವರ ಮಾಜಿ ಪತಿ ಎಸ್ ಮಹೇಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಒಂದು ಕಾಲದಲ್ಲಿ ಇಬ್ಬರೂ ಬಿಜೆಪಿ ಪಕ್ಷಕ್ಕೆ ಮಣ್ಣು ಹೊತ್ತಿದ್ದರು. ಈಗ ಇಬ್ಬರೂ ಬೇರೆ ಬೇರೆಯಾಗಿದ್ದು ಬೇರೆ ಬೇರೆ ಪಕ್ಷಗಳಲ್ಲಿ ತೊಡಗಿಕೊಂಡಿದ್ದಾರೆ. (ಒನ್ಇಂಡಿಯಾ ಕನ್ನಡ)