Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ಫಿಲಂ ಇನ್ಸ್ ಟಿಟ್ಯೂಟ್ ಪ್ರಿನ್ಸಿಪಾಲ್
ಕಳೆದ
20
ವರ್ಷಗಳಿಂದ
ಪ್ರಾಂಶುಪಾಲರಾಗಿ
ಸಂಸ್ಥೆಯ
ಸರ್ವತೋಮುಖ
ಏಳಿಗೆಗಾಗಿ
ಹಗಲಿರುಳು
ಶ್ರಮಿಸಿದ್ದರು
ನಿರ್ಮಾಪಕ
ನಿರ್ದೇಶಕ
ದೊರೆ
ಭಗವಾನ್.
ಈಗವರು
ನಿವೃತ್ತರಾಗಿದ್ದು,
ನೂತನ
ಪ್ರಾಂಶುಪಾಲರಾಗಿ
ಎಸ್
ನಾರಾಯಣ್
ಅವರು
ಪದಗ್ರಹಣ
ಮಾಡುತ್ತಿದ್ದಾರೆ.
ಆದರ್ಶ ಫಿಲಂ ಇನ್ಸ್ ಟಿಟ್ಯೂಟ್ ಸರ್ಕಾರದಿಂದ ಅಂಗೀಕೃತವಾದ ಹಾಗೂ ಅನುದಾನಿತ ಸಂಸ್ಥೆ. ಶೀಘ್ರದಲ್ಲೇ ನಾರಾಯಣ್ ಸಂಸ್ಥೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇಂದಿನ ಯುವ ಪೀಳಿಗೆಗೆ ಅತ್ಯುತ್ತಮ ಚಿತ್ರಗಳನ್ನು ನೀಡಿದ ಅನುಭವಿ ನಿರ್ದೇಶಕರು.
ಆದರ್ಶ ಫಿಲಂ ಇನ್ಸ್ ಟಿಟ್ಯೂಟ್ ನಿಂದ ಕನ್ನಡ ಚಿತ್ರರಂಗಕ್ಕೆ ಹಲವಾರು ಪ್ರತಿಭಾವಂತ ಕಲಾವಿದರು ಹೊರಬಂದಿದ್ದಾರೆ. ಅವರಲ್ಲಿ ಮುಖ್ಯವಾಗಿ ಜಗ್ಗೇಶ್, ಡಿ.ರಾಜೇಂದ್ರ ಬಾಬು, ಗಣೇಶ್, ಪ್ರಿಯಾ ಹಾಸನ್ ಇಲ್ಲಿ ತರಬೇತಿ ಪಡೆದಂತವರು.
ಇತ್ತ ಪ್ರಿನ್ಸಿಪಾಲ್ ಜವಾಬ್ದಾರಿ ಹೊತ್ತಿರುವ ನಾರಾಯಣ್ ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಇಬ್ಬರೂ ಮತ್ತೊಂದು ಪ್ರಯೋಗಕ್ಕೆ ಸಿದ್ಧವಾಗುತ್ತಿದ್ದಾರೆ. ಅಂದಹಾಗೆ ನಾರಾಯಣ್ ಜೊತೆಗಿನ ಉಪೇಂದ್ರ ಚಿತ್ರಕ್ಕೆ 'ಬೃಹಸ್ಪತಿ' ಎಂದು ಹೆಸರಿಡಲಾಗಿದೆ. (ಒನ್ಇಂಡಿಯಾ ಕನ್ನಡ)