Don't Miss!
- News ಬೆಂಗಳೂರಲ್ಲಿ ಬೋರ್ವೆಲ್ ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ತಿಂಗಳು ಬಿಡುಗಡೆ ಆಗಲಿದೆ ಅಜೇಯ್ ರಾವ್ ನಟನೆಯ 'ಧೈರ್ಯಂ'
'ಕೃಷ್ಣ' ಅಜೇಯ್ ರಾವ್ ಅಭಿನಯದ 'ಧೈರ್ಯಂ' ಚಿತ್ರ ಮುಂದಿನ ತಿಂಗಳು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಶಿವತೇಜಸ್ ನಿರ್ದೇಶನದ ಎರಡನೇ ಚಿತ್ರ ಇದಾಗಿದ್ದು, ಸಿನಿಮಾದಲ್ಲಿ ಅಜೇಯ್ ರಾವ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.
ಮೈಂಡ್ ಗೇಮ್ ಮೂಲಕ ಪ್ರೇಕ್ಷಕರಿಗೆ ಬದುಕಿನ ಕಷ್ಟಗಳನ್ನು ಹೇಗೆ ಎದುರಿಸಬೇಕೆಂದು ಧೈರ್ಯ ತುಂಬುವ ಪಾತ್ರಕ್ಕೆ ಅಜೇಯ್ ರಾವ್ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರವಿಶಂಕರ್, ಟಿವಿ ನಿರೂಪಕಿ ಆಗಿ ಅಧಿತಿ ಪ್ರಭುದೇವ್ ಅಭಿನಯಿಸಿದ್ದಾರೆ.
ರೋಚಕವಾಗಿ ಮೂಡಿಬಂದಿರುವ 'ಧೈರ್ಯಂ' ಟ್ರೈಲರ್ ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಥ್ರಿಲ್ ನೀಡುವ ಅಜೇಯ್ ರಾವ್ ಅಭಿನಯದ 'ಧೈರ್ಯಂ' ಟ್ರೈಲರ್, ನೀವೂ ನೋಡಿ..
ವೃತ್ತಿಯಲ್ಲಿ ವೈದ್ಯರಾದ ಡಾ.ರಾಜು 'ಧೈರ್ಯಂ' ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಏಮಿಲ್ ಸಂಗೀತ ಈ ಚಿತ್ರಕ್ಕಿದೆ.
ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿರುವ 'ಧೈರ್ಯಂ', ಸೆನ್ಸಾರ್ ಅಂಗಳದಿಂದ ಪಾಸ್ ಆಗುತ್ತಿದ್ದಂತೆಯೇ ನಿಮ್ಮ ಮುಂದೆ ಬರಲಿದೆ.