Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಲ್ಲಿ ಠಿಕಾಣಿ ಹೂಡಿದ ಟಾಲಿವುಡ್ 'ಸೋಗ್ಗಾಡು'
ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಈಗ ಮೈಸೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಅವರ ಹೊಸ ಚಿತ್ರ 'ಸೋಗ್ಗಾಡೇ ಚಿನ್ನಿ ನಾಯನ' ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಇದೊಂದು ಪಕ್ಕಾ ಎಂಟರ್ ಟೇನರ್ ಆಗಿದ್ದು ಕಳೆದ ಕೆಲವು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ.
ರಾಜಮಂಡ್ರಿಯಲ್ಲಿ ಚಿತ್ರೀಕರಣ ಮುಗಿಸಿಕೊಂಡ 'ಸೋಗ್ಗಾಡು' ಚಿತ್ರ ಇದೀಗ ಮೈಸೂರಿನ ಬಳಿ ಇರುವ 1500 ವರ್ಷಗಳಷ್ಟು ಹಳೆಯ ವಿಷ್ಣು ದೇವಾಲಯದಲ್ಲಿ ಚಿತ್ರೀಕರಣ ಮಾಡುತ್ತಿದೆ. ಇದೇ ಮೊದಲ ಬಾರಿಗೆ ಕಲ್ಯಾಣ್ ಕೃಷ್ಣ ಎಂಬುವವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಅಕ್ಕಿನೇನಿ ನಾಗೇಶ್ವರರಾವ್ ಅವರ ಜನಪ್ರಿಯ ಚಿತ್ರಗಳಲ್ಲಿ ಒಂದಾದ 'ದಸರಾ ಬುಲ್ಲೋಡು' ಚಿತ್ರದ ಒಂದು ಹಾಡು 'ಸೋಗ್ಗಾಡೇ ಚಿನ್ನಿ ನಾಯನ'. ಈ ಹಾಡಿನ ಸಾಲನ್ನೇ ಈಗ ಚಿತ್ರದ ಶೀರ್ಷಿಕೆಯಾಗಿ ಬಳಸಿಕೊಂಡಿದ್ದಾರೆ ಅವರ ಪುತ್ರ ನಾಗಾರ್ಜುನ.
ಅಕ್ಕಿನೇನಿ ನಾಗಾರ್ಜುನ ಹಾಗೂ ಇಡೀ ಚಿತ್ರತಂಡ ಮೈಸೂರಿನಲ್ಲಿ ಬೀಡುಬಿಟ್ಟಿದೆ. ಮಾರ್ಚ್ 15ರ ತನಕ ಚಿತ್ರತಂಡ ಮೈಸೂರಿನಲ್ಲೇ ಉಳಿಯಲಿದೆ. ನಾಗಾರ್ಜುನ ಜೊತೆಗೆ ಚಿತ್ರದ ನಾಯಕಿ ರಮ್ಯಾ ಕೃಷ್ಣ ಸಹ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ನಾಗಾರ್ಜುನ ಅವರ ಹೋಂ ಬ್ಯಾನರ್ ಅನ್ನಪೂರ್ಣ ಸ್ಟುಡಿಯೋಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ರಮ್ಯಾ ಕೃಷ್ಣ ಜೊತೆಗೆ ಲಾವಣ್ಯ ತ್ರಿಪಾಟಿ ಅವರು ಚಿತ್ರದ ಪಾತ್ರವರ್ಗದಲ್ಲಿದ್ದಾರೆ. ಈ ಚಿತ್ರದಲ್ಲಿ ನಾಗಾರ್ಜುನ ಅವರದು ದ್ವಿಪಾತ್ರಾಭಿನಯ. ಅಜ್ಜ ಮತ್ತು ಮೊಮ್ಮಗನಾಗಿ ಅವರು ಕಾಣಿಸಲಿದ್ದಾರೆ.