Don't Miss!
- News ಬೆಂಗಳೂರಲ್ಲಿ ಬೋರ್ವೆಲ್ ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಕ್ಕಿನೇನಿ ನಾಗೇಶ್ವರರಾವ್ ಕಂಡೀಷನ್ ಕ್ರಿಟಿಕಲ್
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅಕ್ಕಿನೇನಿ ನಾಗೇಶ್ವರ ರಾವ್ (90) ಅವರು ಕ್ಯಾನ್ಸರ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಈಗ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತೆಲುಗು ಪತ್ರಿಕೆಗಳಲ್ಲಿ ವರದಿಯಾಗಿದೆ.
ಕೆಲದಿನಗಳ ಹಿಂದಷ್ಟೇ ಅವರಿಗೆ ಶಸ್ತ್ರಚಿಕಿತ್ಸೆಯೂ ನಡೆದಿದೆ. ಆಗಿನಿಂದ ಅವರ ಆರೋಗ್ಯ ಪರಿಸ್ಥಿತಿ ಹದಗೆಡುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೈದರಾಬಾದಿನ ಜೂಬ್ಲಿಹಿಲ್ಸ್ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ಕಾರ್ಪೋರೇಟ್ ಆಸ್ಪತ್ರೆ ವೈದ್ಯರು ಬಂದು ಚಿಕಿತ್ಸೆ ನೀಡುತ್ತಿದ್ದಾರೆ. [ಖ್ಯಾತ ನಟ ಅಕ್ಕಿನೇನಿ ನಾಗಶ್ವೇರರಾವ್ ಗೆ ಕ್ಯಾನ್ಸರ್]
ವೈದ್ಯ ಪರೀಕ್ಷೆಯಲ್ಲಿ ಅವರ ದೇಹದಲ್ಲಿ ಕ್ಯಾನ್ಸರ್ ಕಣಗಳು ಇರುವುದು ಕೆಲ ತಿಂಗಳ ಹಿಂದೆ ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಅಕ್ಕಿನೇನಿ ನಾಗೇಶ್ವರ ರಾವ್ ಮಾಧ್ಯಮಗಳಿಗೆ ತಿಳಿಸಿದ್ದರು. ಚಿಕಿತ್ಸೆಗಾಗಿ ಅವರು ಹೈದರಾಬಾದಿನ ಕಿಮ್ಸ್ ಆಸ್ಪತ್ರೆಗಾಗಿ ದಾಖಲಾಗಿದ್ದರು.
ನಾಗೇಶ್ವರ ರಾವ್ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದಾಗಿ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈಗಾಗಲೆ ಹಲವು ತಾರೆಗಳ ಸಾವು ನೋವುಗಳನ್ನು ಕಂಡಿರುವ ತೆಲುಗು ಚಿತ್ರರಂಗಕ್ಕೆ ಉದಯ್ ಕಿರಣ್ ಆತ್ಮಹತ್ಯೆ ಬರಸಿಡಿಲಾಗಿ ಎರಗಿತ್ತು. ಈಗ ಅಕ್ಕಿನೇನಿ ನಾಗೇಶ್ವರ ರಾವ್ ಅವರ ಆರೋಗ್ಯ ವಿಷಮಿಸಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.