Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಷ್ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು
"ರೆಬೆಲ್ ಸ್ಟಾರ್ ಅಂಬರೀಷ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿ. ಅವರು ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಹೆಚ್ಚು ಕೆಲಸ ಮಾಡಲಿ" ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ಜೆಪಿ ನಗರದ ನಿವಾಸದ ಮುಂದೆ ನೆರೆದಿರುವ ಬಹುತೇಕ ಅಭಿಮಾನಿಗಳ ಬಾಯಿಂದ ಇದೇ ಮಾತು ಕೇಳಿಬರುತ್ತಿದೆ.
ಅಂಬರೀಷ್ ಅವರು ರಾಜಕೀಯದಲ್ಲಿ ಇನ್ನೂ ದೊಡ್ಡ ಹೆಸರು ಮಾಡಬೇಕು. ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಅವರಿಗಿವೆ ಎಂದು ಅಭಿಮಾನಿಗಳು ತಮ್ಮ ಅಭಿಮಾನವನ್ನು ಹೊರಹಾಕಿದ್ದಾರೆ. ಅಂಬರೀಷ್ ಮನಸ್ಸು ಮಾಡಿದ್ದರೆ ಇಷ್ಟೊತ್ತಿಗಾಗಲೆ ಕರ್ನಾಟಕದ ಮುಖ್ಯಮಂತ್ರಿ ಆಗಬಹುದಿತ್ತು.
ಆದರೆ ಅವರು ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಲಿಲ್ಲ ಎಂಬುದು ಇತಿಹಾಸ. ಎರಡು ಬಾರಿ ಸಂಸದರಾಗಿ, ಕೆಲಕಾಲ ಕೇಂದ್ರ ಸಚಿವರಾಗಿ ರಾಜಕೀಯ ರಂಗದಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿದ್ದಾರೆ. ಆದರೆ ಅಂಬರೀಷ್ ಎಂದೂ ರಾಜಕೀಯಕ್ಕೆ ಜೋತು ಬೀಳಲಿಲ್ಲ.
ನಾಗಹಾವು ಚಿತ್ರದಿಂದ ಬಣ್ಣದ ಬದುಕು ಆರಂಭಿಸಿದ ಅಂಬರೀಷ್ ತಮ್ಮ ಸುದೀರ್ಘ 40 ವರ್ಷಗಳ ಚಿತ್ರರಂಗದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪಡುವಾರಳ್ಳಿ ಪಾಂಡವರು, ರಂಗನಾಯಕಿ, ಶುಭಮಂಗಳ, ಒಲವಿನ ಉಡುಗೊರೆ ಮುಂತಾದ ಚಿತ್ರಗಳಲ್ಲಿನ ಅಭಿನಯದ ಮೂಲಕ ಪರಿಪೂರ್ಣ ಕಲಾವಿದ ಎಂದು ಗುರುತಿಸಿಕೊಂಡವರು.
ಮೇ 29ರಿಂದ ಮೂರು ದಿನಗಳ ಕಾಲ ಅಂಬರೀಷ್ ಅವರ ಹುಟ್ಟುಹಬ್ಬ ಕಾರ್ಯಕ್ರಮ ಆಚರಿಸಲು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಮಂಗಳವಾರ ಸಂಜೆ (ಮೇ 29) ಅರಮನೆ ಮೈದಾನದಲ್ಲಿ ನಡೆಯಲಿರುವ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೆ ಅಂಬರೀಷ್ ಅವರ ಜೆಪಿ ನಗರ ನಿವಾಸದ ಮುಂದೆ ಅಭಿಮಾನಿಗಳ ಸಾಗರವೇ ನೆರೆದಿದೆ. ದೊಡ್ಡ ದೊಡ್ಡ ಕಟೌಟ್ಗಳು, ಬ್ಯಾನರ್ಗಳನ್ನು ನಿಲ್ಲಿಸಲಾಗಿದೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲೂ ಅಂಬಿಗೆ ಹುಟ್ಟುಹಬ್ಬ ಶುಭಾಶಯಗಳನ್ನು ಹೇಳುವ ಕಟೌಟ್ಗಳು ರಾರಾಜಿಸುತ್ತಿವೆ.
ಹುಟ್ಟುಹಬ್ಬದ ಅಂಗವಾಗಿ ಚಲನಚಿತ್ರ ಛಾಯಾಗ್ರಾಹಕ ವೀರೇಶ್ ಸೆರೆಹಿಡಿದಿರುವ ಅಂಬರೀಷ್ ಬದುಕಿನ ಅಮೂಲ್ಯ ಕ್ಷಣಗಳನ್ನು ಪ್ರತಿಬಿಂಬಿಸುವ 600 ಫೋಟೋಗಳನ್ನು ಜೆಪಿ ನಗರ ಒಂದನೇ ಹಂತದಲ್ಲಿರುವ ದುರ್ಗಾಪರಮೇಶ್ವರಿ ಮೈದಾನದಲ್ಲಿ ಪ್ರದರ್ಶನಕ್ಕೆ ಇಡಲಾಗುವುದು. ಇದಕ್ಕೆ ಅಂಬಿ ಬಿಂಬ, ಇದು ಚಕ್ರವ್ಯೂಹ ಎಂದು ಹೆಸರನ್ನು ಆಕರ್ಷಕವಾಗಿ ಇಡಲಾಗಿದೆ. (ಒನ್ಇಂಡಿಯಾ ಕನ್ನಡ)