Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದ ಹಿತಕ್ಕಾಗಿ ನನ್ನ ಜೀವ ಮುಡಿಪು, ಅಂಬರೀಶ್
ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಕರ್ನಾಟಕಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ರಾಜಭವನ ಚಲೋ ಜಾಥಾವನ್ನು ಉದ್ದೇಶಿಸಿ ಅಂಬಿ ಮಾತನಾಡುತ್ತಿದ್ದರು.
ಕಾವೇರಿ ನದಿ ಪ್ರಾಧಿಕಾರ ನೀಡಿರುವ ಕರ್ನಾಟಕ ವಿರೋಧಿ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಗೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಅಂಬಿ ಮಾತನಾಡಿದರು.
ಈ ಪ್ರತಿಭಟನೆಯನ್ನು ರಾಜಕೀಯಕ್ಕಾಗಿ ಹಮ್ಮಿಕೊಂಡಿಲ್ಲ. ರಾಜಕೀಯದಿಂದ ನನಗೆ ಏನೂ ಆಗಬೇಕಾಗಿಲ್ಲ. ಕಾವೇರಿ ಕರ್ನಾಟಕದ ಆಸ್ತಿ. ರಾಜ್ಯದ ಜನರ ಹಿತಕ್ಕಾಗಿ ನನ್ನ ಜೀವನ ಮುಡಿಪು. ಕೇಂದ್ರ ಸರ್ಕಾರ ನೀರು ಬಿಡಲು ಆದೇಶಿಸಿದ ಬಳಿಕ ಅಧ್ಯಯನ ತಂಡ ಕಳುಹಿಸಿದೆ.
ಕೇಂದ್ರದ ಈ ನಿಲುವಿಗೆ ಅಂಬಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಅವರು ಚಳವಳಿ ನಿರತರರನ್ನು ಉದ್ದೇಶಿಸಿ ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡಿದರು.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸಿನೆಮಾ ನಟರಾದ ಪ್ರೇಮ್ ಹಾಗೂ ಶಿವರಾಮ್ ಅವರೂ ಉಪಸ್ಥಿತರಿದ್ದರು. ನಟಿ ಪ್ರಿಯಾ ಹಾಸನ್ ಅವರೂ ಪಾಲ್ಗೊಂಡಿದ್ದರು. (ಒನ್ಇಂಡಿಯಾ ಕನ್ನಡ)